Don't Miss!
- News Summer Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ.. ಇಲ್ಲಿವೆ ಸಲಹೆಗಳು
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Automobiles ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Technology ಈ ಹೊಸ 5G ಫೋನ್ ಖರೀದಿಸಿದರೆ, ವಿವೋ ಕಂಪನಿಯ ಇಯರ್ಫೋನ್ ಉಚಿತ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಊಹಾಪೋಹಗಳನ್ನು ಬಿಡಿ : ದರ್ಶನ್ ರನ್ನ ಕಣ್ಣಾರೆ ಕಂಡ ಸಂದೇಶ್ ನಾಗರಾಜ್ ಹೇಳಿದಿಷ್ಟು!
Recommended Video
ಚಾಲೆಂಜಿಗ್ ಸ್ಟಾರ್ ದರ್ಶನ್ ಆರೋಗ್ಯ ಸ್ಥಿತಿಯ ಬಗ್ಗೆ ಒಂದೊಂದು ಮಾಹಿತಿಗಳು ಸಿಗುತ್ತಿವೆ. ಇದೀಗ 'ಒಡೆಯ' ಸಿನಿಮಾದ ನಿರ್ಮಾಪಕ ಹಾಗೂ ದರ್ಶನ್ ಆಪ್ತರಾದ ಸಂದೇಶ್ ನಾಗರಾಜ್ ಅಪಘಾತದ ಬಗ್ಗೆ ಮಾತನಾಡಿದ್ದಾರೆ.
ನಟ ದರ್ಶನ್ ಕಾರು ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಇಂದು ಬೆಳಗಿನ ಜಾವ ಸುಮಾರು ಮೂರು ಗಂಟೆಯ ಸಮಯದಲ್ಲಿ ಅಪಘಾತವಾಗಿದೆ. ಈ ವಿಷಯ ತಿಳಿದ ನಂತರ ಸಂದೇಶ್ ನಾಗರಾಜ್ ಆಸ್ಪತ್ರೆಗೆ ತೆರಳಿದ್ದು, ದರ್ಶನ್ ಜೊತೆಗೆ ಮಾತನಾಡಿದ್ದಾರೆ ಹಾಗೂ ವೈದ್ಯರ ಜೊತೆಗೆ ಚರ್ಚೆ ನಡೆಸಿದ್ದಾರೆ.
ದರ್ಶನ್ ಸ್ಥಿತಿ ಹೇಗಿದೆ? ವಿನೋದ್ ಪ್ರಭಾಕರ್ ನೀಡಿದ ಮಾಹಿತಿ
ದರ್ಶನ್ ರನ್ನ ನೋಡಿರುವ ಅವರು ಘಟನೆಯ ಬಗ್ಗೆ ಹಾಗೂ ದರ್ಶನ್ ಚಿಕಿತ್ಸೆಯ ಬಗ್ಗೆ ವಿವರಗಳನ್ನು ನೀಡಿದ್ದಾರೆ. ಮುಂದೆ ಓದಿ...
ಜೋರಾಗಿ ಮಳೆ ಬರುತ್ತಿದ್ದರಿಂದ ಅಪಘಾತ
''ದರ್ಶನ್ ಅಪಘಾತದ ಬಗ್ಗೆ ಮಾಧ್ಯಮಗಳಲ್ಲಿ ಏನೇನೋ ಬರುತ್ತಿದೆ. ರಿಯಲ್ ಆಗಿ ನಡೆದ ಘಟನೆಯನ್ನು ನಾನು ಹೇಳುತ್ತೇನೆ. ನನಗೆ ನಾಲ್ಕು ಗಂಟೆಗೆ ಈ ವಿಷಯ ತಿಳಿಯಿತು. ಬೆಳಗ್ಗೆ ದರ್ಶನ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದಾಗ ಜೋರಾಗಿ ಮಳೆ ಬರುತ್ತಿತ್ತು. ಆ ಕಾರಣ ಕಾರಿನ ಚಕ್ರಗಳು ಸ್ಕಿಡ್ ಆಗಿದೆ.'' - ಸಂದೇಶ್ ನಾಗರಾಜ್, ನಿರ್ಮಾಪಕ
ನಟ ದರ್ಶನ್ ಅಪಘಾತದ ಬಗ್ಗೆ ಜಗ್ಗೇಶ್ ಟ್ವೀಟ್
ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು
''ಅಪಘಾತವಾದ ಆಡಿ ಕ್ಯೂ 7 ಕಾರು ದರ್ಶನ್ ಅವರದ್ದು. ಕಾರಿನಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಸ್ನೇಹಿತ ಈ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ದರ್ಶನ್ ಫ್ರೆಂಡ್ ಕಾರ್ ಡೈವಿಂಗ್ ಮಾಡುತ್ತಿದ್ದು, ದರ್ಶನ್ ಮುಂದು ಕುಳಿತಿದ್ದರು.'' - ಸಂದೇಶ್ ನಾಗರಾಜ್, ನಿರ್ಮಾಪಕ
ಮೈಸೂರಿನಲ್ಲಿ ಕಾರು ಅಪಘಾತ, 'ದಾಸ' ದರ್ಶನ್ ಗೆ ಕೈ ಮುರಿತ
ದರ್ಶನ್ ಮೂಳೆ ಫ್ರಾಕ್ಚರ್ ಆಗಿದೆ
''ದರ್ಶನ್ ಗೆ ಮೈನರ್ ಆಗಿ ಗಾಯ ಆಗಿದೆ. ಬಲಗೈ ನ ಮೂಳೆ ಫ್ರಾಕ್ಚರ್ ಆಗಿದೆ. ಶಸ್ತ್ರ ಚಿಕಿತ್ಸೆ ಬಳಿಕ ದರ್ಶನ್ ಚೆನ್ನಾಗಿ ಇದ್ದಾರೆ. ಕೈಗೆ ಪ್ಲೇಟ್ ಹಾಕಿದ್ದು, ಎರಡು ವಾರದ ನಂತರ ಅದನ್ನು ತೆಗೆಯುತ್ತಾರೆ. ದೇವರಾಜ್ ಬೆರಳಿಗೆ ಪೆಟ್ಟು ಬಿದಿದೆ. ಪ್ರಜ್ವಲ್ ದೇವರಾಜ್ ಹಣೆಗೆ ಸಣ್ಣ ಪೆಟ್ಟಾಗಿದೆ. ಡೈವರ್ ಗೆ ಬಲಗೈ ಹೊಡೆತ ಬಿದ್ದಿದೆ.'' - ಸಂದೇಶ್ ನಾಗರಾಜ್, ನಿರ್ಮಾಪಕ
ಇಂದಿನಿಂದ ಬೆಂಗಳೂರಿನಲ್ಲಿ ಶೂಟಿಂಗ್ ಇತ್ತು
''ಓಡೆಯ' ಸಿನಿಮಾದ ಶೂಟಿಂಗ್ ನಿನ್ನೆ ಮೈಸೂರಿನಲ್ಲಿ ಮುಗಿದಿತ್ತು. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿತ್ತು. ರಾತ್ರಿ ಒಬ್ಬರ ಮನೆಯಲ್ಲಿ ಊಟ ಮಾಡಿ ಬರುತ್ತಿದ್ದ ವೇಳೆ ಈ ಘಟನೆ ನೆಡೆದಿದೆ. ಸದ್ಯ ಡಾಕ್ಟರ್ ಶಣೈ ಅಜಯ್ ಹೆಗ್ಡೆ ಚಿಕಿತ್ಸೆ ನೀಡುತ್ತಿದ್ದಾರೆ.'' - ಸಂದೇಶ್ ನಾಗರಾಜ್, ನಿರ್ಮಾಪಕ
ಅಳುತ್ತಿದ್ದಾನೆ ಮಗ ವಿನೀಶ್
''ನಾನು ಆಸ್ಪತ್ರೆಗೆ ಹೋದಾಗ ನನ್ನ ಜೊತೆಗೆ ದರ್ಶನ್ ಮಾತನಾಡಿದರು. ಧ್ರುವ ಸರ್ಜಾ, ಸೃಜನ್ ಲೋಕೇಶ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಸ್ಪತ್ರೆಗೆ ಬಂದಿದ್ದಾರೆ. ದರ್ಶನ್ ಮಗ ವಿನೀಶ್ ಅಪ್ಪನನ್ನು ನೋಡದೆ ಅಳುತ್ತಿದ್ದ. ಬಳಿಕ ಫೋನ್ ನಲ್ಲಿ ಅವರ ಜೊತೆಗೆ ಮಾತಾಡಿದ.'' - ಸಂದೇಶ್ ನಾಗರಾಜ್, ನಿರ್ಮಾಪಕ
ಒಂದು ವಾರ ವಿಶ್ರಾಂತಿ ಬೇಕಾಗಬಹುದು
''ದರ್ಶನ್ ಗೆ ಏನು ಆಗಿಲ್ಲ. ಯಾವುದೇ ತೊಂದರೆ ಇಲ್ಲ ಎಂದು ಡಾಕ್ಟರ್ ಹೇಳಿದ್ದಾರೆ. ನಾಳೆಯಿಂದ ಅವರು ಅವರ ಮನೆಯಲ್ಲಿ ಇರುತ್ತಾರೆ. ಅಭಿಮಾನಿಗಳು ಆತಂಕ ಪಡಬೇಡಿ ಎಂದು ಕೇಳುಕೊಳ್ಳುತ್ತೇನೆ. ಇಂದು ರಾತ್ರಿ ಅಥವಾ ನಾಳೆ ಡಿಸ್ಚಾರ್ಜ್ ಮಾಡಬಹುದು.'' - ಸಂದೇಶ್ ನಾಗರಾಜ್, ನಿರ್ಮಾಪಕ