twitter
    For Quick Alerts
    ALLOW NOTIFICATIONS  
    For Daily Alerts

    'ಒಡೆಯ' ಬಿಡುಗಡೆಗೂ ಮೊದಲೇ ದರ್ಶನ್ ಮತ್ತೊಂದು ಚಿತ್ರಕ್ಕೆ ಅಡ್ವಾನ್ಸ್ ನೀಡಿದ ಸಂದೇಶ್

    |

    ನಟ ದರ್ಶನ್ 'ಒಡೆಯ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ನಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾವಾಗಿದೆ. ಈ ಸಿನಿಮಾದ ನಂತರ ಇದೇ ನಿರ್ಮಾಣ ಸಂಸ್ಥೆಯ ಮತ್ತೊಂದು ಸಿನಿಮಾದಲ್ಲಿ ದರ್ಶನ್ ನಟಿಸುತ್ತಿದ್ದಾರೆ.

    ಈ ವಿಷಯವನ್ನು ನಿರ್ಮಾಪಕ ಸಂದೇಶ್ ತಿಳಿಸಿದ್ದಾರೆ. 'ಒಡೆಯ' ಸಿನಿಮಾ ಬಿಡುಗಡೆಗೂ ಮೊದಲೇ ತಮ್ಮ ಮುಂದಿನ ಸಿನಿಮಾದಲ್ಲಿ ನಟಿಸಲು ದರ್ಶನ್ ರಿಗೆ ಮುಂಗಡ ಹಣವನ್ನು ನೀಡಲಾಗಿದೆಯಂತೆ. ಅಡ್ವಾನ್ಸ್ ನೀಡಿ ತಮ್ಮ ಬ್ಯಾನರ್ ನ ಮತ್ತೊಂದು ಸಿನಿಮಾಗೆ ಬುಕ್ ಮಾಡಿಕೊಂಡಿದ್ದಾರೆ.

    ಮಕ್ಕಳಿಗೂ ಕೇಳಿರದ ಸಹಾಯವನ್ನು 'ಒಡೆಯ' ನಿರ್ಮಾಪಕರಿಗೆ ಕೇಳಿದರು ದರ್ಶನ್ ತಾಯಿಮಕ್ಕಳಿಗೂ ಕೇಳಿರದ ಸಹಾಯವನ್ನು 'ಒಡೆಯ' ನಿರ್ಮಾಪಕರಿಗೆ ಕೇಳಿದರು ದರ್ಶನ್ ತಾಯಿ

    'ಪ್ರಿನ್ಸ್' ಸಿನಿಮಾದ ಮೂಲಕ ಮೊದಲ ಬಾರಿಗೆ ದರ್ಶನ್ ಸಿನಿಮಾಗೆ ಸಂದೇಶ್ ನಾಗರಾಜ್ ಬಂಡವಾಳ ಹಾಕಿದರು. ಆ ನಂತರ 'ಮಿಸ್ಟರ್ ಐರಾವತ' ಚಿತ್ರ ನಿರ್ಮಾಣ ಮಾಡಿದ್ದರು. ಇದೀಗ 'ಒಡೆಯ' ಇದೇ ಕಾಂಬಿನೇಶನ್ ನಲ್ಲಿ ಬರುತ್ತಿದೆ.

    Sandesh Productions Will Be Producing Another Movie To Darshan

    'ಒಡೆಯ' ಸಿನಿಮಾದ ನಂತರ 'ಗಂಡುಗಲಿ ಮದಕರಿ ನಾಯಕ' ಹಾಗೂ 'ರಾಬರ್ಟ್' ಸಿನಿಮಾಗಳಲ್ಲಿ ದರ್ಶನ್ ಬ್ಯುಸಿ ಇದ್ದಾರೆ. ಈ ಸಿನಿಮಾಗಳ ನಂತರ ಸಂದೇಶ್ ಪ್ರೊಡಕ್ಷನ್ಸ್ ಸಿನಿಮಾ ಶುರು ಆಗಬಹುದು.

    ''ಹ್ಯಾಟ್ರಿಕ್ ಹೀರೋ ಒಬ್ರೆ ಅದು ಶಿವರಾಜ್ ಕುಮಾರ್''- ದರ್ಶನ್''ಹ್ಯಾಟ್ರಿಕ್ ಹೀರೋ ಒಬ್ರೆ ಅದು ಶಿವರಾಜ್ ಕುಮಾರ್''- ದರ್ಶನ್

    ಅಂದಹಾಗೆ, ದರ್ಶನ್ ಅಭಿನಯದ 'ಒಡೆಯ' ಸಿನಿಮಾ ಡಿಸೆಂಬರ್ 12 ರಂದು ಬಿಡುಗಡೆ ಆಗುತ್ತಿದೆ. ಎಂ ಡಿ ಶ್ರೀಧರ್ ಈ ಸಿನಿಮಾದ ನಿರ್ದೇಶನ ಮಾಡಿದ್ದಾರೆ. ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ. ಸನಾ ತಿಮ್ಮಯ್ಯ ನಾಯಕಿ ಆಗಿದ್ದಾರೆ.

    English summary
    Sandesh Productions will be producing another movie to actor Darshan.
    Monday, December 2, 2019, 11:58
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X