Don't Miss!
- News Bengaluru Rain: ಬೆಂಗಳೂರಿನ ಹಲವೆಡೆ ಗುಡುಗು ಜಿನುಗು ಮಳೆ.. ಮನೆಯಿಂದ ಹೊರಬಂದು ಕುಣಿದು ಕುಪ್ಪಳಿಸಿದ ಮಕ್ಕಳು
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಾಲ್ಕೇ ದಿನದಲ್ಲಿ 15 ಕೋಟಿ ಬಾಚಿದ ಸಂಗೊಳ್ಳಿ ರಾಯಣ್ಣ
ಕನ್ನಡದಲ್ಲಿ 'ಗಂಡುಗಲಿ ಕುಮಾರರಾಮ' ಚಿತ್ರದ ನಂತರ ಯಾವುದೇ ಐತಿಹಾಸಿಕ ಕಥೆಯಾಧಾರಿತ ಚಿತ್ರ ಬಂದಿರಲಿಲ್ಲ. ಆ 'ಗಂಡುಗಲಿ ಕುಮಾರರಾಮ' ಚಿತ್ರ ನಿರೀಕ್ಷಿಸಿದಷ್ಟು ಯಶಸ್ವಿಯಾಗಿರಲಿಲ್ಲ. ಹೀಗಾಗಿ ಸಹಜವಾಗಿಯೇ ಈ ಐತಿಹಾಸಿಕ 'ಸಂಗೊಳ್ಳಿ ರಾಯಣ್ಣ' ಚಿತ್ರದ ಬಗ್ಗೆ ಭಾರೀ ನಿರೀಕ್ಷೆಯೇನೂ ಇರಲಿಲ್ಲ. ಆದರೆ ದರ್ಶನ್ ನಾಯಕತ್ದವ ಚಿತ್ರವಾದ್ದರಿಂದ ಸಹಜವಾಗಿಯೇ ತಕ್ಕಮಟ್ಟಿಗೆ ಯಶಸ್ಸನ್ನು ನಿರೀಕ್ಷಿಸಲಾಗಿತ್ತು. ಆಶ್ಚರ್ಯವೆಂಬಂತೆ ಚಿತ್ರವು ನಿರೀಕ್ಷೆ ಮೀರಿ ಯಶಸ್ವಿಯಾಗಿದೆ.
ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ ಎಲ್ಲಾ ವರ್ಗದ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ 'ಸಂಗೊಳ್ಳಿ ರಾಯಣ್ಣ' ಚಿತ್ರವು ಸಿನಿಮಾ ತುಂಬಾ ಚೆನ್ನಾಗಿದೆ ಎಂಬ ಭಾರಿ ಮೌತ್ ಪಬ್ಲಿಸಿಟಿಗೆ ಪಾತ್ರವಾಗಿದೆ. ಇಬ್ಬರು ಜೊತೆಯಾದರೆ ಸಾಕು 'ಸಂಗೊಳ್ಳಿ ರಾಯಣ್ಣ' ಚಿತ್ರ ನೋಡಿದ್ದೀರಾ ಎಂದು ಕೇಳುವಷ್ಟರ ಮಟ್ಟಿಗೆ ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಇನ್ನು ಕೇವಲ 129 ಚಿತ್ರಮಂದಿಗಳಲ್ಲಿ ಬಿಡುಗಡೆಯಾಗಿದ್ದ 'ಸಂಗೊಳ್ಳಿ ರಾಯಣ್ಣ', ಈಗ ಇನ್ನೂ 20 ಹೆಚ್ಚು ಥಿಯೇಟರ್ ಪಡೆದುಕೊಂಡಿದೆ.
ಅಷ್ಟೇ ಅಲ್ಲ, ಚಿತ್ರರಂಗದಲ್ಲಿ ಹೊಸಬರು ಹಳಬರು ಹಾಗೂ ಅವರಕಡೆಯವರು ಇವರ ಕಡೆಯವರು ಎಂಬ ಭೇದವಿಲ್ಲದೇ ಗಣ್ಯಾತಿಗಣ್ಯರು ಸೇರಿದಂತೆ 'ಸಂಗೊಳ್ಳಿ ರಾಯಣ್ಣ' ಚಿತ್ರನೋಡಲು ಕುಟುಂಬ ಸಮೇತ ಬರುತ್ತಿದ್ದಾರೆ. ಕನ್ನಡ ಚಿತ್ರಗಳೆಂದರೆ ಮೂಗು ಮುರಿಯುತ್ತಿದ್ದ ಜನರೂ ಪ್ರೇಕ್ಷಕರಾಗಿ ಬದಲಾಗುತ್ತಿದ್ದಾರೆ. ಮಳೆ, ಛಳಿ ಲೆಕ್ಕಿಸದೇ ಕನ್ನಡ ಚಿತ್ರವೊಂದನ್ನು ನೋಡಲು ಚಿತ್ರಮಂದಿರದತ್ತ ಜನಪ್ರವಾಹ ಬರುತ್ತಿರುವುದು ಹೊಸ ಬೆಳವಣಿಗೆಯೇ ಸರಿ. ಮುಂದಿನ ಪುಟ ನೋಡಿ....