Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕಿ ವಂದನಾ ವಿರುದ್ಧ ಜೀವ ಬೆದರಿಕೆ ದೂರು ನೀಡಿದ ನಟಿ ಸಂಜನಾ
ಸ್ಯಾಂಡಲ್ ವುಡ್ ನಟಿ ಸಂಜನಾ ಮತ್ತು ವಂದನಾ ಜೈನ್ ಬಾರ್ ಗಲಾಟೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ನಟಿ ಸಂಜನಾ ಇಂದು ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಗೆ ತೆರಳಿ ವಂದನಾ ವಿರುದ್ಧ ಜೀವ ಬೆದರಿಕೆ ದೂರು ದಾಖಲಿಸಿದ್ದಾರೆ. ಡಿಸಿಪಿ ಚೇತನ್ ಸಿಂಗ್ ರಾಥೋಡ್ ಭೇಟಿಯಾಗಿ ಡಿಸೆಂಬರ್ 24ರಂದು ರಾತ್ರಿ ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದಾರೆ.
ಬಾರ್ ನಲ್ಲಿ ವಂದನಾ ಹಲ್ಲೆ ಮಾಡಿರುವ ಬಗ್ಗೆ ಮೆಡಿಕಲ್ ರೆಕಾರ್ಡ್ ಜೊತೆಗೆ ಬಂದು ಸಂಜನಾ ದೂರು ನೀಡಿದ್ದಾರೆ. ತಾಯಿ ಜೊತೆ ಪೊಲೀಸ್ ಸ್ಟೇಷನ್ ಗೆ ಆಗಮಿಸಿದ ಸಂಜನಾ, ವಂದನಾ ಅವರು ರಾತ್ರಿ ಫೋನ್ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ವಂದನಾ ವಿರುದ್ದ ದೂರು ಕೊಟ್ಟಿದ್ದಾರೆ.
ಈ ಸಮಯದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಂಜನಾ, "ವಿಸ್ಕಿ ಬಾಟಲ್ ನಲ್ಲಿ ಹೊಡೆದರು ಎಂದು ಹೇಳಲಾಗುತ್ತಿದೆ, ಇದಕ್ಕೆ ಏನು ಸಾಕ್ಷಿ ಇದೆ, ಯಾವ ಆಧಾರದ ಮೇಲೆ ಈ ರೀತಿಯಾ ಸುದ್ದಿಗಳನ್ನು ಬಿತ್ತರಿಸಲಾಗುತ್ತಿದೆ ಎಂದು ಗರಂ ಆದರು. ನಾನು ಐದು ಭಾಷೆಯಲ್ಲಿ ಅಭಿನಯಿಸುತ್ತಿದ್ದೀನಿ ಈ ರೀತಿಯಾಗಿ ಹೇಳಿ ನನ್ನ ಹೆಸರನ್ನು ಹಾಳು ಮಾಡಬೇಡಿ" ಎಂದರು.
ಬಾರ್ ನಲ್ಲಿ ಕುಡಿದು ಗಲಾಟೆ: ನಟಿ ಸಂಜನಾ ವಿರುದ್ಧ ದೂರು ನೀಡಿದ ಬಾಲಿವುಡ್ ನಿರ್ಮಾಪಕಿ
"ಮೊದಲು ಗಲಾಟೆ ಮಾಡಿದ್ದು ವಂದನಾ, ಅವರು ಕೆಟ್ಟಪದಗಳಿಂದ ಬೈದರು, ಅಲ್ಲದೆ ತಾಯಿಯ ಬಗ್ಗೆ ಕೆಟ್ಟ ಪದಳಿಂದ ಬೈದರು ಹಾಗಾಗಿ ನಾನು ಕೂಡ ಬೈದೆ ಅಷ್ಟೆ, ವಿಸ್ಕಿ ಬಾಟಲ್ ನಿಂದ ಹೊಡೆದಿಲ್ಲ. ಗಲಾಟೆ ಆದ ರಾತ್ರಿ ವಂದನಾ ಪೊಲೀಸರಿಗೆ ಫೋನ್ ಮಾಡಿದ್ದರು, ನನ್ನನ್ನು ಅರೆಸ್ಟ್ ಮಾಡಲು ರಾತ್ರಿ ಇಬ್ಬರು ಪೊಲೀಸರು ಬಂದಿದ್ದರು. ಆದರೆ ಆ ಸಮಯದಲ್ಲಿ ನಾನು ಇರಲಿಲ್ಲ. ಹೋಟೆಲ್ ನಿಂದ ಹೊರಟಿದ್ದೆ" ಎಂದು ಹೇಳಿದ್ದಾರೆ.
ಇನ್ನು ಒಂದುವೇಳೆ ವಂದನಾ ದೂರು ವಾಪಾಸ್ ಪಡೆದರೆ ನಾನು ದೂರನ್ನು ವಾಪಾಸ್ ತೆಗೆದುಕೊಳ್ಳುತ್ತೇನೆ. ಆಕೆಯ ಸಹವಾಸವೆ ಬೇಡ ನನಗೆ. ನಾನು ಈಗ ಸಿನಿಮಾದಲ್ಲಿ ಬ್ಯುಸಿಯಾಗಿದ್ದೀನಿ. ನನ್ನ ಹೆಸರು ಹಾಳಾಗುವುದು ಇಷ್ಟವಿಲ್ಲ ಎಂದು ಹೇಳಿದ್ದಾರೆ.