Don't Miss!
- News
Vande Bharat Express: ಕೇವಲ ಸೆಲ್ಫಿಗಾಗಿ ವಂದೇ ಭಾರತ್ ಏರಿದ ವ್ಯಕ್ತಿ ರೈಲಿನಲ್ಲೇ ಲಾಕ್ ಆದ- ಮುಂದೇನಾಯ್ತು ಓದಿ
- Technology
ಫಾಸ್ಟ್ರಾಕ್ನಿಂದ ಅತ್ಯಾಕರ್ಷಕ ಸ್ಮಾರ್ಟ್ವಾಚ್ ಲಾಂಚ್; ಆಫರ್ ಬೆಲೆ ಎಷ್ಟು!?
- Finance
Budget 2023: ಪೆಟ್ರೋಲ್, ಚಿನ್ನ, ಬಜೆಟ್ ಬಳಿಕ ಈ ವಸ್ತುಗಳು ದುಬಾರಿ?
- Sports
ಭಾರತ vs ನ್ಯೂಜಿಲೆಂಡ್: 1ನೇ ಏಕದಿನ ಪಂದ್ಯ: ಟಾಸ್ ರಿಪೋರ್ಟ್, Live ಸ್ಕೋರ್ ಹಾಗೂ ಆಡುವ ಬಳಗ
- Automobiles
ಪರ್ಫಾಮೆನ್ಸ್ ಕಾರು ಪ್ರಿಯರಿಗಾಗಿ Altroz Racer ಬಿಡುಗಡೆಗೊಳಿಸಲು ಸಜ್ಜಾದ ಟಾಟಾ ಮೋಟಾರ್ಸ್
- Lifestyle
ಈ 5 ಸರಳ ವ್ಯಾಯಾಮ ಮಾಡಿದರೆ ಸಾಕು ಥೈರಾಯ್ಡ್ ಸಮಸ್ಯೆ ಇರಲ್ಲ: ಡಾ. ರಾಜು ಟಿಪ್ಸ್
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಕಷ್ಟದ ಸಮಯದಲ್ಲೂ ಜೊತೆಯಲ್ಲಿ ನಿಂತ ಅಭಿಮಾನಿಗಳು ಮತ್ತು ಸ್ನೇಹಿತರಿಗೆ ಸಂಜನಾ ಪ್ರೀತಿಯ ಸಂದೇಶ
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
Recommended Video
ಕಷ್ಟದ ಸಮಯದಲ್ಲೂ ಜೊತೆಯಲ್ಲಿ ನಿಂತ ಅಭಿಮಾನಿಗಳಿಗೆ ಮತ್ತು ಸ್ನೇಹಿತರಿಗೆ ಧನ್ಯವಾದ ತಿಳಿಸಿದ್ದಾರೆ. ಇನ್ಸ್ಟಾಗ್ರಾಮ್ ಸ್ಟೇಟಸ್ ಮೂಲಕ ಧನ್ಯವಾದ ತಿಳಿಸಿರುವ ಸಂಜನಾ ದೀರ್ಘವಾಗಿ ಬರೆದುಕೊಂಡಿದ್ದಾರೆ. ಜೈಲಿನಿಂದ ಬಿಡುಗಡೆಯಾಗಿ 1 ತಿಂಗಳ ಬಳಿಕ ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ.
ಕಷ್ಟದ ಸಮಯದಲ್ಲೂ ಜೊತೆಯಲ್ಲಿನಿಂತ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ ಸಂಜನಾ, ಸದ್ಯದಲ್ಲೇ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗುವುದಾಗಿ ಹೇಳಿದ್ದಾರೆ.
ಸಂಜನಾ
ಗಲ್ರಾನಿಗೆ
ಬಲವಂತದ
ಮತಾಂತರ:
ಮೌಲ್ವಿ
ವಿರುದ್ಧ
ದೂರು
ಇನ್ಸ್ಟಾಗ್ರಾಮ್ ಸ್ಟೇಟಸ್ ನಲ್ಲಿ ಬರೆದುಕೊಂಡಿರುವ 'ನನಗೆ ಸಂದೇಶ ಕಳುಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಾನು ಪ್ರತಿಯೊಬ್ಬರ ಸಂದೇಶವನ್ನು ಓದುತ್ತಿದ್ದೇನೆ. ನಿಮ್ಮ್ ನಿಜವಾದ ಕಾಳಜಿ ಮತ್ತು ಪ್ರೀತಿಗೆ ನಾನಗೆ ಆಶೀರ್ವಾದ. ಆರೋಗ್ಯ ಸರಿಯಾದ ಮೇಲೆ ನಾನು ಮತ್ತೆ ಮೊದಲಿನಂತೆ ಸಾಮಾಜಿಕ ಜಾಲತಾಣಕ್ಕೆ ಮರಳುತ್ತೇನೆ. ನಿಮ್ಮೆಲ್ಲರ ಪ್ರೀತಿಗೆ ವಿಶೇಷವಾಗಿ ನನ್ನ ಕುಟುಂಬ, ಸ್ನೇಹಿತರು ಮತ್ತು ನನ್ನ ಅಭಿಮಾನಿಗಳಿಗೆ ನಾನು ಎಷ್ಟು ಧನ್ಯವಾದ ಹೇಳಿದರು ಸಾಲದು' ಎಂದು ಬರೆದುಕೊಂಡಿದ್ದಾರೆ.
ಡ್ರಗ್ಸ್ ಜಾಲದ ಸಂಬಂಧ ನಟಿ ಸಂಜನಾ 2020 ಸೆಪ್ಟೆಂಬರ್ 8ರಂದು ಜೈಲು ಪಾಲಾಗಿದ್ದರು. ಸುಮಾರು 90 ದಿನಗಳ ನಂತರ ಅಂದರೆ ಡಿಸೆಂಬರ್ 12ರಂದು ಸಂಜನಾ ಅನಾರೋಗ್ಯದ ಕಾರಣದಿಂದ ವೈದ್ಯಕೀಯ ಆಧಾರದ ಮೇಲೆ ಜಾಮೀನು ಮಂಜೂರು ಮಾಡಲಾಯಿತು.
ಇತ್ತೀಚಿಗಷ್ಟೆ ವಕೀಲರೊಬ್ಬರು, ನಟಿ ಸಂಜನಾ ಗಲ್ರಾನಿಯನ್ನು ಬಲವಂತದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ ಎಂದು ಮೌಲ್ವಿಯೊಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂಜನಾ ರನ್ನು ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಲಾಗಿದೆ, ಸಂಜನಾ ಹೆಸರನ್ನು 'ಮಹಿರಾ' ಎಂದು ಬದಲಾಯಿಸಲಾಗಿದೆ. ಈ ಬಲವಂತದ ಮತಾಂತರ ಮಾಡಿರುವುದು ಟ್ಯಾನರಿ ರಸ್ತೆಯ ದಾರುಲ್ ಉಲುಮ್ ಶಾ ವಲಿಯುಲ್ಲಾ ಮದರಸಾದ ಮೌಲ್ವಿ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರನ್ನು ಸ್ವೀಕರಿಸಿರುವ ಪೊಲೀಸರು ಕಾನೂನು ತಜ್ಞರ ಸಲಹೆ ಪಡೆಯಲು ಮುಂದಾಗಿದ್ದಾರೆ.