Don't Miss!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಡಿಯೋ: ಕೊರೊನಾ ಸಂಕಷ್ಟದಲ್ಲಿ ಸಂಜನಾ ಗಲ್ರಾನಿ ಸಮಾಜ ಸೇವೆ
ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ವಾಸ ಅನುಭವಿಸಿ ಇದೀಗ ಜಾಮೀನಿನ ಮೇಲೆ ಹೊರಗಿರುವ ನಟಿ ಸಂಜನಾ ಗಲ್ರಾನಿ ಕೋವಿಡ್ ಸಮಯದಲ್ಲಿ ಜನರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ನಟಿ ರಾಗಿಣಿ ದ್ವಿವೇದಿ ಸಂಕಷ್ಟದಲ್ಲಿರುವವರಿಗೆ ಆಹಾರ ವಿತರಣೆ, ಆಹಾರ ಧಾನ್ಯ ವಿತರಣೆ ಕಾರ್ಯ ಮಾಡುತ್ತಿದ್ದಾರೆ. ಇದೀಗ ನಟಿ ಸಂಜನಾ ಗಲ್ರಾನಿ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುತ್ತಿದ್ದಾರೆ.
ಈ ಬಗ್ಗೆ ಫೇಸ್ಬುಕ್ನಲ್ಲಿ ವಿಡಿಯೋ ಹಾಕಿರುವ ನಟಿ ಸಂಜನಾ, 'ಈ ಸಮಯದಲ್ಲಿ ಬಹಳ ಮೊದಲ ಅಗತ್ಯವಾಗಿರುವ ಬೆಡ್ ಹಾಗೂ ಆಮ್ಲಜನಕದ ವ್ಯವಸ್ಥೆ ಮಾಡುವ ದಾರಿ ನನಗೆ ಗೊತ್ತಿಲ್ಲ. ಹಾಗಾಗಿ ಈ ಲಾಕ್ಡೌನ್ ಅವಧಿಯಲ್ಲಿ ಹಸಿವು ಹೋಗಲಾಡಿಸುವ ಕಾರ್ಯಕ್ಕೆ ಮುಂದಾಗಿದ್ದೇನೆ' ಎಂದಿದ್ದಾರೆ.
ಉಚಿತವಾಗಿ ದಿನಸಿ ವಿತರಿಸುವ ಕಾರ್ಯ ಮಾಡುತ್ತಿರುವುದಾಗಿ ಹೇಳಿದ ಸಂಜನಾ ತಾವು ವಿತರಣೆ ಮಾಡಲು ತಯಾರು ಮಾಡಿಟ್ಟುಕೊಂಡಿರುವ ದೊಡ್ಡ ದಿನಸಿ ಪ್ಯಾಕೆಟ್ಗಳನ್ನು ವಿಡಿಯೋದಲ್ಲಿ ತೋರಿಸಿದ್ದಾರೆ.
ಸಂಜನಾ ಗಲ್ರಾನಿ ಫೌಂಡೇಶನ್ ವತಿಯಿಂದ ಈ ಕಾರ್ಯ ಮಾಡುತ್ತಿದ್ದು, ನನ್ನ ಈ ಕಾರ್ಯಕ್ಕೆ ನನ್ನ ಕುಟುಂಬದವರು ಸಹ ಜೊತೆ ನಿಂತಿದ್ದಾರೆ. ಅವರಿಗೆ ನಾನು ಧನ್ಯವಾದ ಹೇಳಲೇಬೇಕು ಎಂದು ಸಂಜನಾ ಹೇಳಿದ್ದಾರೆ.
ನಾವು ಯಾರಿಗೆ ಈ ಕಿಟ್ಗಳನ್ನು ನೀಡಬೇಕು ಎಂದು ಈಗಾಗಲೇ ಪಟ್ಟಿ ಮಾಡಿಕೊಂಡಿದ್ದೇವೆ. ನಾವೇ ಖುದ್ದಾಗಿ ಮನೆಗಳಿಗೆ ಭೇಟಿ ನೀಡಿ ಅವರ ಪರಿಸ್ಥಿತಿ ಅರಿತು ಯಾರಿಗೆ ದಿನಸಿ ಕಿಟ್ನ ಅವಶ್ಯಕತೆ ಇದೆ, ಯಾರಿಗೆ ಇಲ್ಲ ಎಂಬುದನ್ನು ನಿರ್ಧರಿಸಿ ಅವಶ್ಯಕತೆ ಇದ್ದವರಿಗೆ ಮಾತ್ರವೇ ಕಿಟ್ ನೀಡುತ್ತಿದ್ದೇವೆ ಎಂದಿದ್ದಾರೆ.
Recommended Video
ಸಂಜನಾ ಗಲ್ರಾನಿ ನೀಡುತ್ತಿರುವ ದಿನಸಿ ಕಿಟ್ನಲ್ಲಿ ಐದು ಕೆಜಿ ಅಕ್ಕಿ, ಎರಡು ಕೇಜಿ ಮೈದಾ, ಒಂದು ಲೀಟರ್ ಅಡುಗೆ ಎಣ್ಣೆ, ಒಂದು ಕೇಜಿ ಸಕ್ಕರೆ, ಎರಡು ಕೆಜಿ ಬೇಳೆ ಇದೆ.