Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪು ಬರ್ತಡೇಗೆ ಪೋಸ್ಟರ್ ರಿಲೀಸ್ ಮಾಡಿದ ಸಂತೋಷ್ ಆನಂದ್ ರಾಮ್
Recommended Video
'ರಾಜಕುಮಾರ' ಚಿತ್ರದ ನಿರ್ದೇಶಕ ಸಂತೋಷ್ ಆನಂದ್ ರಾಮ್ ಜೊತೆಯಲ್ಲಿ ಮತ್ತೆ ಪುನೀತ್ ರಾಜ್ ಕುಮಾರ್ ಸಿನಿಮಾ ಮಾಡುತ್ತಿದ್ದಾರೆ. ಈ ಮೂಲಕ 'ರಾಜಕುಮಾರ' ಯಶಸ್ಸಿನ ನಂತರ ಮತ್ತೊಮ್ಮೆ ಅದೇ ಕಾಂಬಿನೇಷನ್ ಒಟ್ಟಾಗಿದೆ.
ಮಾರ್ಚ್ 17 ರಂದು ಪುನೀತ್ ಅವರ ಹುಟ್ಟುಹಬ್ಬವಿದೆ. ಹೀಗಾಗಿ, ಅಪ್ಪು ಫ್ಯಾನ್ಸ್ ಹಾಗೂ ಸಿನಿಮಾರಂಗದ ಸ್ನೇಹಿತರೆಲ್ಲ ಸೇರಿ ಬರ್ತಡೇ ಆಚರಿಸುತ್ತಿದ್ದಾರೆ. ತಮ್ಮ ನೆಚ್ಚಿನ ನಟನಿಗೆ 'ರಾಜಕುಮಾರ' ನಿರ್ದೇಶಕ ಸಂತೋಷ್ ಆನಂದ್ ರಾಮ್ ಕೂಡ ವಿಶ್ ಮಾಡಿದ್ದು, ಹೊಸ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಬಾಲ್ಯದ ಫೋಟೋ ಜೊತೆ ಅಪ್ಪು ನಾಯಕನಾದ ಮೇಲಿನ ಕೆಲವು ಫೋಟೋಗಳನ್ನ ಸೇರಿಸಿ ''ರಾಜ್ ರ ರಾಜನಿಗೆ'' ಜನ್ಮದಿನದ ಶುಭಾಶಯಗಳನ್ನ ತಿಳಿಸಿದ್ದಾರೆ.
'ನಟ ಸಾರ್ವಭೌಮ' ಶೀರ್ಷಿಕೆಯನ್ನ ಅಭಿಮಾನಿಗಳು ಒಪ್ಪಿಕೊಂಡ್ರಾ, ಇಲ್ವಾ.!
ಅಂದ್ಹಾಗೆ, ಇದು ಪುನೀತ್ ರಾಜ್ ಕುಮಾರ್ ಅವರ 28ನೇ ಸಿನಿಮಾ. ಇದಕ್ಕೂ ಮುಂಚೆ ಪವನ್ ಒಡೆಯರ್ ನಿರ್ದೇಶನದಲ್ಲಿ ತಯಾರಾಗುತ್ತಿರುವ 'ನಟ ಸಾರ್ವಭೌಮ' ಚಿತ್ರ ತೆರೆಕಾಣಲಿದೆ. ಸಂತೋಷ್ ಆನಂದ್ ರಾಮ್ ಅವರ ಮೂರನೇ ಸಿನಿಮಾ ಇದಾಗಿದ್ದು, ಪುನೀತ್ ಜೊತೆಯಲ್ಲಿ ಎರಡನೇ ಚಿತ್ರವಾಗಿರಲಿದೆ.
'ನಟ ಸಾರ್ವಭೌಮ' ಪುನೀತ್ ಗೆ ಶುಭಕೋರಿದ ಜಗ್ಗೇಶ್
ಇನ್ನು ಈ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲೇ ಮೂಡಿ ಬರಲಿದ್ದು, ಈ ನಿರ್ಮಾಣ ಸಂಸ್ಥೆಯಲ್ಲಿ ತಯಾರಾಗುತ್ತಿರುವ 6ನೇ ಸಿನಿಮಾ. ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿರುವ ಚಿತ್ರತಂಡ ಸದ್ಯದಲ್ಲೇ ಟೈಟಲ್ ಅನಾವರಣಗೊಳ್ಳಲಿದೆ.