Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್ ಸಿನಿಮಾ ಬಗ್ಗೆ 'ರಾಜಕುಮಾರ' ನಿರ್ದೇಶಕ ಸಂತೋಷ್ ಮಾತು!
ನಿರ್ದೇಶಕ ಸಂತೋಷ್ ಆನಂದ್ ರಾಮ್ ಎರಡು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಸ್ಟಾರ್ ಡೈರೆಕ್ಟರ್ ಅಂತ ಕರೆಸಿಕೊಂಡಿದ್ದಾರೆ. ಮೊದಲು ಯಶ್ ನಂತರ ಪುನೀತ್ ಜೊತೆ ಸಿನಿಮಾ ಮಾಡಿದ್ದ ಸಂತೋಷ್ ಈಗ ಸುದೀಪ್ ಅವರಿಗೆ ಆಕ್ಷನ್ ಕಟ್ ಹೇಳಿಲಿದ್ದಾರೆ ಎಂಬ ಸುದ್ದಿ ಸಿಕ್ಕಾಪಟ್ಟೆ ಸೌಂಡ್ ಮಾಡಿತ್ತು.
ಮುಂದಿನ ಚಿತ್ರದ ಬಗ್ಗೆ ಕೊನೆಗೂ ಬಾಯ್ಬಿಟ್ಟ 'ರಾಜಕುಮಾರ' ನಿರ್ದೇಶಕ ಸಂತೋಷ್
ಈಗ ಸ್ವತಃ ನಿರ್ದೇಶಕ ಸಂತೋಷ್ ಆನಂದ್ ರಾಮ್ ನಿಮ್ಮ 'ಫಿಲ್ಮಿಬೀಟ್ ಕನ್ನಡ'ದೊಂದಿಗೆ ಮಾತನಾಡಿದ್ದಾರೆ. ಸುದೀಪ್ ಅವರ ಜೊತೆ ಸಿನಿಮಾ ಮಾಡುವ ಸುದ್ದಿಯ ಬಗ್ಗೆ ಸಂತೋಷ್ ತಮ್ಮ ಸ್ಪಷ್ಟನೆಯನ್ನು ನೀಡಿದ್ದಾರೆ. ತಮ್ಮ ಮಾತುಗಳ ಮೂಲಕ ಎಲ್ಲ ಅಂತೆಕಂತೆಗಳಿಗೆ ಸಂತೋಷ್ ಬ್ರೇಕ್ ಹಾಕಿದ್ದಾರೆ. ಮುಂದೆ ಓದಿ...
ನನ್ನ ಗಮನಕ್ಕೆ ಬಂದಿದೆ
''ನನ್ನ ಮತ್ತು ಸುದೀಪ್ ಅವರ ಸಿನಿಮಾ ಬಗ್ಗೆ ಸುದ್ದಿ ಹರಿದಾಡಿದೆ. ಆದು ನಿಜ ಆಗಿದ್ದರೆ ನಾನೇ ಹೇಳುತ್ತಿದೆ. ಈ ಸುದ್ದಿ ನಿಜ ಅಲ್ಲ.. ಆದ್ದರಿಂದ ನಾನು ಈ ವಿಷಯಕ್ಕೆ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ'' ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ 'ಫಿಲ್ಮಿಬೀಟ್ ಕನ್ನಡ'ಕ್ಕೆ ಹೇಳಿದರು
ನನ್ನ ಸಿನಿಮಾ ಅಲ್ಲ
''ಹೊಂಬಾಳೆ ಫಿಲ್ಮ್ಸ್ ಅವರಿಗೆ ಸುದೀಪ್ ಅವರ ಜೊತೆ ಸಿನಿಮಾ ಮಾಡುವ ಪ್ಲಾನ್ ಇದೆ. ಸುದೀಪ್ ಅವರು ಕೂಡ ಹೊಂಬಾಳೆ ಬ್ಯಾನರ್ ನಲ್ಲಿ ಸಿನಿಮಾ ಮಾಡುವ ಇಚ್ಛೆ ವ್ಯಕ್ತ ಪಡಿಸಿದ್ದಾರೆ. ಆದರೆ ಅದು ನನ್ನ ಸಿನಿಮಾ ಅಲ್ಲ'' - ಸಂತೋಷ್ ಆನಂದ್ ರಾಮ್, ನಿರ್ದೇಶಕ
ಅದು ದೊಡ್ಡ ಜವಾಬ್ದಾರಿ
''ಮುಂದೆ ಸುದೀಪ್ ಅವರಿಗೆ ಸಿನಿಮಾ ಮಾಡುವ ಯೋಜನೆ ಇದೆ. ಆದರೆ ಅವರು ಇನ್ನೂ ಕಥೆ ಓಕೆ ಮಾಡಬೇಕು.. ಅವರ ಡೇಟ್ಸ್ ನೋಡಿಕೊಳ್ಳಬೇಕು.. ಸುದೀಪ್ ಅವರಿಗೆ ಸಿನಿಮಾ ಮಾಡುವುದು ತುಂಬ ದೊಡ್ಡ ಜವಾಬ್ದಾರಿ. ಯಾಕಂದ್ರೆ ಐದಾರು ರಾಜ್ಯಗಳಿಗೆ ಗೊತ್ತಿರುವ ನಟ ಅವರು'' - ಸಂತೋಷ್ ಆನಂದ್ ರಾಮ್, ನಿರ್ದೇಶಕ
ಆಸೆ ಇಬ್ಬರಿಗೂ ಇದೆ
''ನನಗೆ ಸುದೀಪ್ ಅವರ ಜೊತೆ ಕೆಲಸ ಮಾಡುವ ಆಸೆ ಇದೆ. ಅವರು ಕೂಡ ಅದಕ್ಕೆ ಒಪ್ಪಿದ್ದಾರೆ. ಆದರೆ ಆದು ಯಾವಾಗ ಶುರು ಆಗುತ್ತದೆ ಎಂಬುದು ಗೊತ್ತಿಲ್ಲ. ಒಟ್ಟಿಗೆ ಸಿನಿಮಾ ಮಾಡುವ ಆಸೆ ಇಬ್ಬರಿಗೂ ಇದೆ. ಆದರೆ ಅದಕ್ಕೆ ಟೈಂ ಕೂಡಿ ಬರಬೇಕು, ಕಥೆ ಸರಿಯಾಗಿ ಸಿಗಬೇಕು'' - ಸಂತೋಷ್ ಆನಂದ್ ರಾಮ್, ನಿರ್ದೇಶಕ
ಮುಂದಿನ ಸಿನಿಮಾ
''ಸದ್ಯಕ್ಕೆ ನಾನು ಹೊಂಬಾಳೆ ಫಿಲ್ಮ್ ಬ್ಯಾನರ್ ಗೆ ಸಿನಿಮಾ ಮಾಡುತ್ತೇನೆ ಆ ಸಿನಿಮಾದ ನಾಯಕ ಇನ್ನೂ ಯಾರು ಎಂಬುದು ಫೈನಲ್ ಆಗಿಲ್ಲ. ಕಥೆ ರೆಡಿ ಆದ ಮೇಲೆ ಯಾರನ್ನು ಹೀರೋ ಮಾಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ'' - ಸಂತೋಷ್ ಆನಂದ್ ರಾಮ್, ನಿರ್ದೇಶಕ