Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆನ್ಸಾರ್ ನಲ್ಲಿ 'ಸಂತು'ಗೆ ಕ್ಲೀನ್ ಚಿಟ್, ಅ.28ಕ್ಕೆ ಅಬ್ಬರ ಶುರು
ರಾಕಿಂಗ್ ಸ್ಟಾರ್ ಯಶ್, ಸ್ಯಾಂಡಲ್ ವುಡ್ ಪ್ರಿನ್ಸಸ್ ರಾಧಿಕಾ ಪಂಡಿತ್ ಒಂದಾಗಿ ಕಾಣಿಸಿಕೊಂಡಿರುವ, 'ಸಂತು Straight Forward' ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ 'ಯು' ಪ್ರಮಾಣ ಪತ್ರ ದೊರೆತಿದ್ದು, ಅಕ್ಟೋಬರ್ 28 ರಂದು ಸಿನಿಮಾ ರಿಲೀಸ್.
ಭಾವಿ ಜೋಡಿಗಳಾದ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಕಾಣಿಸಿಕೊಂಡಿರುವ 'ಸಂತು Straight Forward' ಸಿನಿಮಾ, ದೀಪಾವಳಿ ಹಬ್ಬಕ್ಕೆ ತೆರೆ ಕಾಣುತ್ತೆ ಅಂತ ಈ ಮೊದಲು ಸುದ್ದಿಯಾಗಿತ್ತು.
ಮಾತ್ರವಲ್ಲದೇ ಚಿತ್ರತಂಡದವರು ಥಿಯೇಟರ್ ಲಿಸ್ಟ್ ಕೂಡ ಈಗಾಗಲೇ ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದಲ್ಲಿ ಮತ್ತು ಇಡೀ ಕರ್ನಾಟಕದಾದ್ಯಂತ 'ಸಂತು Straight Forward' ಗ್ರ್ಯಾಂಡ್ ಆಗಿ ತೆರೆ ಕಾಣಲಿದೆ.[ಸ್ಟಾರ್-ವಾರ್, ಮಣ್ಣು-ಮಸಿ ಅಂತ್ಹೇಳಿ ನಟರ ಮಧ್ಯೆ ಹುಳಿ ಹಿಂಡಬೇಡಿ: ಕಿಚ್ಚ]
ಇದೀಗ ಸೆನ್ಸಾರ್ ಮಂಡಳಿ ಕೂಡ ಸಿನಿಮಾ ಬಿಡುಗಡೆಗೆ ಗ್ರೀನ್ ಸಿಗ್ನಲ್ ನೀಡಿದ್ದು, 'ಯು' ಪ್ರಮಾಣಪತ್ರ ನೀಡುವ ಮೂಲಕ ರಿಲೀಸ್ ಮಾಡಲು ಅಧೀಕೃತ ಘೋಷಣೆ ಮಾಡಿದೆ. 'ಮಾಸ್ಟರ್ ಪೀಸ್' ನಂತರ ಯಶ್ ಅವರ ಸಿನಿಮಾ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ದೀಪಾವಳಿ ಹಬ್ಬಕ್ಕೆ 'ಸಂತು Straight Forward' ಉಡುಗೊರೆ ದೊರೆತಂತಾಗಿದೆ.[ಈ ಬಾರಿ ತೆರೆ ಮೇಲೆ 'ದೀಪಾವಳಿ' ಆಚರಿಸ್ತಾರಾ ಭಾವಿ ದಂಪತಿ?]
ಕೆ.ಮಂಜು ನಿರ್ಮಾಣ ಮಾಡಿರುವ ಈ ಚಿತ್ರವನ್ನು ಮಹೇಶ್ ರಾವ್ ಅವರು ನಿರ್ದೇಶನ ಮಾಡಿದ್ದಾರೆ. ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದ್ದು, ವಿ.ಹರಿಕೃಷ್ಣ ಅವರು ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
ಸಿನಿಮಾದ ಕೆಲಸಗಳು ಅರ್ಧದಷ್ಟು ಬಾಕಿ ಇದೆ, ಸೆನ್ಸಾರ್ ಬೇರೆ ಆಗಿಲ್ಲ, ಆಗಲೇ ಥಿಯೇಟರ್ ಲಿಸ್ಟ್ ಬೇರೆ ಬಿಟ್ಟಿದ್ದಾರೆ ಅಂತ ಅಭಿಮಾನಿಗಳು ಈ ಮೊದಲು ಆತಂಕಪಟ್ಟಿದ್ದರು. ಆದರೆ ಇದೀಗ ಚಿತ್ರಕ್ಕೆ ಸೆನ್ಸಾರ್ ಕೂಡ ಆಗಿದ್ದು, ಅಕ್ಟೋಬರ್ 28, ಮುಂದಿನ ಶುಕ್ರವಾರ ಇಡೀ ವಿಶ್ವದಾದ್ಯಂತ ಅದ್ಧೂರಿಯಾಗಿ ಈ ಸಿನಿಮಾ ತೆರೆ ಕಾಣಲಿದೆ.['ಸಂತು' ಅಲಿಯಾಸ್ ಯಶ್ ಕಡೆಯಿಂದ ಅಭಿಮಾನಿಗಳಿಗೆ ಸರ್ ಪ್ರೈಸ್]
ಅದೇ ದಿನದಂದು ಸುದೀಪ್-ಉಪೇಂದ್ರ ಜುಗಲ್ ಬಂದಿಯ 'ಮುಕುಂದ ಮುರಾರಿ' ಕೂಡ ತೆರೆ ಕಾಣುತ್ತಿದ್ದು, ಮೂವರು ಸ್ಟಾರ್ ನಟರನ್ನು ಬಿಗ್ ಸ್ಕ್ರೀನ್ ನಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ.