Just In
Don't Miss!
- News
ಜನರು ದಿನದ 24 ಗಂಟೆಯಲ್ಲಿ ಯಾವಾಗ ಬೇಕಾದರೂ ಕೊರೊನಾ ಲಸಿಕೆ ಪಡೆಯಬಹುದು
- Sports
ಐಪಿಎಲ್ ಕುರಿತ ಹೇಳಿಕೆಗೆ ಕ್ಷಮೆಯಾಚಿಸಿದ ವೇಗಿ ಡೇಲ್ ಸ್ಟೇನ್
- Lifestyle
ದಿನ ಭವಿಷ್ಯ: ಗುರುವಾರದ ರಾಶಿಫಲ ಹೇಗಿದೆ ನೋಡಿ
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- Automobiles
31 ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ಟಾಟಾ ಹೊಸ ಸಿಗ್ನಾ 3118.ಟಿ ಟ್ರಕ್ ಬಿಡುಗಡೆ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮೊದಲ ಸಿನಿಮಾ ಹಾಡು ಹಾಡಿದ 'ಸರಿಗಮಪ' ಶ್ರೀ ಹರ್ಷ
ಜೀ ಕನ್ನಡ ವಾಹಿನಿಯ 'ಸರಿಗಮಪ ಸೀಸನ್ 13' ಕಾರ್ಯಕ್ರಮದ ಸ್ಪರ್ಥಿ ಆಗಿದ್ದ ಶ್ರೀ ಹರ್ಷ ಈಗ ಸಿನಿಮಾ ಹಾಡನ್ನು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಡಿ ಎಲ್ಲರ ಮನ ಗೆದಿದ್ದ ಶ್ರೀ ಹರ್ಷಗೆ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ.
'ಪುಣ್ಯಾತ್ ಗಿತ್ತಿಯರು' ಎಂಬ ಹೊಸ ಕನ್ನಡ ಸಿನಿಮಾದಲ್ಲಿ ಶ್ರೀ ಹರ್ಷ ಒಂದು ಹಾಡನ್ನು ಹಾಡಿದ್ದಾರೆ. ಈ ಹಿಂದೆ 'ಪಾಸಿಬಲ್' ಚಿತ್ರವನ್ನು ನಿರ್ದೇಶನ ಮಾಡಿದ್ದ ರಾಜ್.ಬಿ.ಎನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ಹರ್ಷ ಅವರ ಹಾಡಿನ ರೆಕಾರ್ಡಿಂಗ್ ಸದ್ಯ ಮುಗಿದಿದೆ. ಚಿತ್ರಕ್ಕೆ ರಾಮನುಜಂ ಸಂಗೀತ ನೀಡಿದ್ದಾರೆ. ಚಿತ್ರದ ಇನ್ನೊಂದು ಹಾಡನ್ನು ಸುಪ್ರಿಯಾ ಲೋಹಿತ್ ಹಾಡಿದ್ದಾರೆ.
'ಪುಣ್ಯಾತ್ ಗಿತ್ತಿಯರು' ಸಿನಿಮಾದಲ್ಲಿ ಒಟ್ಟು 5 ನಾಯಕಿಯರು ಇದ್ದಾರೆ. ಇವರ ಪೈಕಿ ಜೀ ಕನ್ನಡ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ದಿವ್ಯ ಕೂಡ ಒಬ್ಬರಾಗಿದ್ದಾರೆ. ಇತ್ತೀಚಿಗಷ್ಟೆ ಸರಿಗಪಮ ಕಾರ್ಯಕ್ರಮದ ಮತ್ತೊಬ್ಬ ಸ್ಪರ್ಧಿ ಸಂಚಿತ್ ಹೆಗ್ಡೆ 'ಕಾಲೇಜ್ ಕುಮಾರ್' ಮತ್ತು 'ಚಮಕ್' ಚಿತ್ರದಲ್ಲಿ ಹಾಡಿದ್ದರು. ಈಗ ಶ್ರೀ ಹರ್ಷ ಕೂಡ ಸಿನಿಮಾದಲ್ಲಿ ಹಾಡಿದ್ದಾರೆ.