Don't Miss!
- Finance Tumakuru namma metro: ಮಾದಾವರದಿಂದ ತುಮಕೂರು ಮೆಟ್ರೋ ಕಾರಿಡಾರ್ ಅಪಡೇಟ್
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- News Srivari Seva: ತಿರುಮಲ ಶ್ರೀವಾರಿಯ ಸೇವಕರಾಗಲು ಒಂದು ಅದ್ಭುತ ಅವಕಾಶ.. ಕೂಡಲೇ ಬುಕ್ ಮಾಡಿ
- Automobiles XUV300: ಮಹೀಂದ್ರಾ ಎಕ್ಸ್ಯುವಿ300 ಕಾರನ್ನು ನಿಮ್ಮ ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Technology OnePlus: ಒನ್ಪ್ಲಸ್ ವಾಚ್ 2 ನಾರ್ಡಿಕ್ ಬ್ಲೂ ಆವೃತ್ತಿ ಲಾಂಚ್! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಸಿನಿಮಾ ಹಾಡು ಹಾಡಿದ 'ಸರಿಗಮಪ' ಶ್ರೀ ಹರ್ಷ
ಜೀ ಕನ್ನಡ ವಾಹಿನಿಯ 'ಸರಿಗಮಪ ಸೀಸನ್ 13' ಕಾರ್ಯಕ್ರಮದ ಸ್ಪರ್ಥಿ ಆಗಿದ್ದ ಶ್ರೀ ಹರ್ಷ ಈಗ ಸಿನಿಮಾ ಹಾಡನ್ನು ಹಾಡಿದ್ದಾರೆ. ಕಾರ್ಯಕ್ರಮದಲ್ಲಿ ಹಾಡಿ ಎಲ್ಲರ ಮನ ಗೆದಿದ್ದ ಶ್ರೀ ಹರ್ಷಗೆ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ.
'ಪುಣ್ಯಾತ್ ಗಿತ್ತಿಯರು' ಎಂಬ ಹೊಸ ಕನ್ನಡ ಸಿನಿಮಾದಲ್ಲಿ ಶ್ರೀ ಹರ್ಷ ಒಂದು ಹಾಡನ್ನು ಹಾಡಿದ್ದಾರೆ. ಈ ಹಿಂದೆ 'ಪಾಸಿಬಲ್' ಚಿತ್ರವನ್ನು ನಿರ್ದೇಶನ ಮಾಡಿದ್ದ ರಾಜ್.ಬಿ.ಎನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀ ಹರ್ಷ ಅವರ ಹಾಡಿನ ರೆಕಾರ್ಡಿಂಗ್ ಸದ್ಯ ಮುಗಿದಿದೆ. ಚಿತ್ರಕ್ಕೆ ರಾಮನುಜಂ ಸಂಗೀತ ನೀಡಿದ್ದಾರೆ. ಚಿತ್ರದ ಇನ್ನೊಂದು ಹಾಡನ್ನು ಸುಪ್ರಿಯಾ ಲೋಹಿತ್ ಹಾಡಿದ್ದಾರೆ.
'ಪುಣ್ಯಾತ್ ಗಿತ್ತಿಯರು' ಸಿನಿಮಾದಲ್ಲಿ ಒಟ್ಟು 5 ನಾಯಕಿಯರು ಇದ್ದಾರೆ. ಇವರ ಪೈಕಿ ಜೀ ಕನ್ನಡ 'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ದಿವ್ಯ ಕೂಡ ಒಬ್ಬರಾಗಿದ್ದಾರೆ. ಇತ್ತೀಚಿಗಷ್ಟೆ ಸರಿಗಪಮ ಕಾರ್ಯಕ್ರಮದ ಮತ್ತೊಬ್ಬ ಸ್ಪರ್ಧಿ ಸಂಚಿತ್ ಹೆಗ್ಡೆ 'ಕಾಲೇಜ್ ಕುಮಾರ್' ಮತ್ತು 'ಚಮಕ್' ಚಿತ್ರದಲ್ಲಿ ಹಾಡಿದ್ದರು. ಈಗ ಶ್ರೀ ಹರ್ಷ ಕೂಡ ಸಿನಿಮಾದಲ್ಲಿ ಹಾಡಿದ್ದಾರೆ.