Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನೀನಾಸಂ ಸತೀಶ್ ನಟನೆಯ 'ಗೋದ್ರಾ' ಚಿತ್ರದ ಶೂಟಿಂಗ್ ವೇಳೆ ಅವಘಡ!
ಮೊನ್ನೆ ಮೊನ್ನೆ ತಾನೇ ನಟ ಲೂಸ್ ಮಾದ ಯೋಗಿ ಮತ್ತು ಕೋಮಲ್ ನಟನೆಯ 'ಕೆಂಪೇಗೌಡ 2' ಚಿತ್ರದ ಶೂಟಿಂಗ್ ವೇಳೆ ಅವಘಡ ಸಂಭವಿಸಿತ್ತು. ಇದೀಗ ಸತೀಶ್ ನೀನಾಸಂ ಅಭಿನಯದ 'ಗೋದ್ರಾ' ಚಿತ್ರದ ಚಿತ್ರೀಕರಣದಲ್ಲಿ ಅಂಥದ್ದೇ ಘಟನೆ ನಡೆದಿದೆ.
'ಗೋದ್ರಾ' ಚಿತ್ರದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿತ್ತು. ಕೈಮ್ಯಾಕ್ಸ್ ದೃಶ್ಯದ ಶೂಟಿಂಗ್ ಇದಾಗಿದ್ದು, ಬಾಂಬ್ ಬ್ಲ್ಯಾಸ್ಟ್ ದೃಶ್ಯವನ್ನು ಚಿತ್ರತಂಡ ಸೆರೆಹಿಡಿಯುತ್ತಿತ್ತು. ಈ ವೇಳೆ ಜೀಪ್ ನಲ್ಲಿ ಕುಳಿತಿದ್ದ ನಟ ಸತೀಶ್ ಅವರ ಹೊಟ್ಟೆಯ ಭಾಗಕ್ಕೆ ಗಾಜು ಚುಚ್ಚಿಕೊಂಡು ಗಾಯ ಆಗಿದೆ.
ಚಿತ್ರೀಕರಣದ ವೇಳೆ ಬಾಂಬ್ ರಿವರ್ಸ್ ಆಗಿ ಬ್ಲಾಸ್ಟ್ ಆದ ಕಾರಣ ಜೀಪ್ ನಲ್ಲಿ ಹೋಗುತ್ತಿದ್ದ ಸತೀಶ್ ಹೊಟ್ಟೆಯ ಭಾಗಕ್ಕೆ ಗಾಜು ಬಂದು ಬಿದಿದ್ದೆ. ಸತೀಶ್ ಜೊತೆ ಸಹ ಕಲಾವಿದರೂ ಸಹ ಜೀಪ್ ನಲ್ಲಿ ಕುಳಿತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿರುವ ನಟ ನೀನಾಸಂ ಸತೀಶ್ ಅವರಿಗೆ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಾಯಕ್ಕೆ ಹೊಲಿಗೆ ಹಾಕಿದ್ದು, ವೈದ್ಯರು ಒಂದು ವಾರದ ವಿಶ್ರಾಂತಿಯನ್ನು ಪಡೆಯಲು ಸೂಚಿಸಿದ್ದಾರೆ. 'ಗೋದ್ರಾ' ನಂದೀಶ್ ನಿರ್ದೇಶನದ ಚಿತ್ರವಾಗಿದ್ದು, ಚಿತ್ರದ ಕೊನೆ ದಿನದ ಶೂಟಿಂಗ್ ವೇಳೆ ಈ ಘಟನೆ ನಡೆದಿದೆ.