Don't Miss!
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬ್ರಹ್ಮಾಚಾರಿ'ಯಾಗ್ತಾರಂತೆ ನಟ ನೀನಾಸಂ ಸತೀಶ್
ನೀನಾಸಂ ಸತೀಶ್ ಸದ್ಯ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. 'ಅಯೋಗ್ಯ' ಮತ್ತು ಚಂಬಲ್ ಸಿನಿಮಾದ ಸಕ್ಸಸ್ ನ ಖುಷಿಯಲ್ಲಿ ಇರುವ ಸತೀಶ್ ಈಗ 'ಬ್ರಹ್ಮಾಚಾರಿ'ಯಾಗ್ತಿದ್ದಾರಂತೆ. ಸತೀಶ್ ಯಾಕೆ ಬ್ರಹ್ಮಾಚಾರಿ ಆಗಲು ನಿರ್ಧರಿಸಿದ್ದಾರೆ ಅಂತ ಅಚ್ಚರಿ ಪಡಬೇಡಿ, ಇದು ರಿಯಲ್ ಅಲ್ಲ ರೀಲ್. ಸತೀಶ್ ಅಭಿನಯದ ಮುಂದಿನ ಸಿನಿಮಾದ ಹೆಸರು 'ಬ್ರಹ್ಮಾಚಾರಿ'
ಹೌದು, ನೀನಾಸಂ ಸತೀಶ್ 'ಬ್ರಹ್ಮಾಚಾರಿ' ಎನ್ನುವ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಉದಯ್ ಮೆಹ್ತಾ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಸತೀಶ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 'ಬ್ರಹ್ಮಾಚಾರಿ' ಅಂತ ಟೈಟಲ್ ಇಟ್ಟಿರುವ ಚಿತ್ರತಂಡ '100 ಪರ್ಸೆಂಟ್ ವರ್ಜಿನ್' ಎನ್ನುವ ಸಬ್ ಟೈಟಲ್ ಇಟ್ಟಿದೆ.
ಅಂದ್ಹಾಗೆ, 'ಬ್ರಹ್ಮಾಚಾರಿ' ಪಕ್ಕಾ ಕಾಮಿಡಿ ಸಿನಿಮಾ. ಈ ಸಿನಿಮಾಗೆ ನಿರ್ದೇಶಕ ಚಂದ್ರ ಮೋಹನ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ 'ಬಾಂಬೆ ಮಿಠಾಯಿ' ಮತ್ತು 'ಡಬಲ್ ಇಂಜಿನ್' ಸಿನಿಮಾ ನಿರ್ದೇಶನ ಮಾಡಿದ್ದ ಚಂದ್ರ ಮೋಹನ್ 'ಬ್ರಹ್ಮಾಚಾರಿ' ಸಿನಿಮಾ ಮೂಲಕ ಮೂರನೇ ಚಿತ್ರ ಕೈಗೆತ್ತಿಕೊಂಡಿದ್ದಾರೆ.
'ಲವ್ ಇನ್ ಮಂಡ್ಯ' ಸಿನಿಮಾದ ನಂತರ ನಿರ್ಮಾಪಕ ಉದಯ್ ಮೆಹ್ತಾ ಮತ್ತು ಸತೀಶ್ ಎರಡನೇ ಬಾರಿಗೆ ಒಂದಾಗುತ್ತಿದ್ದಾರೆ. ಇನ್ನು ಈಗಾಗಲೆ ಎರಡು ದೊಡ್ಡ ಸಕ್ಸಸ್ ನೀಡಿರುವ ಸತೀಶ್ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ.
ಹಾಗಾಗಿ, 'ಬ್ರಹ್ಮಾಚಾರಿ' ಸಿನಿಮಾ ಸತೀಶ್ ಪಾಲಿಗೆ ಬಹುಮುಖ್ಯವಾದ ಸಿನಿಮಾವಾಗಿದೆ. ಅದೇನೆ ಇದ್ದರು 'ಬ್ರಹ್ಮಾಚಾರಿ' ಆಗಲು ಹೊರಟಿರುವ ಸತೀಶ್ ಜೊತೆಗೆ ಸಿನಿಮಾದಲ್ಲಿ ಯಾರೆಲ್ಲ ಸಾಥ್ ನೀಡಲಿದ್ದಾರೆ ಎನ್ನುವುದು ಸದ್ಯದಲ್ಲೆ ಗೊತ್ತಾಗಲಿದೆ. ಯುಗಾದಿ ಹಬ್ಬಕ್ಕೆ ಸಿನಿಮಾ ಲಾಂಚ್ ಆಗಲಿದೆ.