Don't Miss!
- News 'ಚೊಂಬು' ವಾಗ್ದಾದ: ಕಾವೇರಿ ನೀರು ಹರಿಸಿ ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟಿದ್ದು ನೀವು: ಬಿಜೆಪಿ ತಿರುಗೇಟು
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Automobiles ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಗೋದ್ರಾ' ಟೈಟಲ್ ಬದಲಾಯಿಸಲು ಸತೀಶ್ ನೀನಾಸಂ ನಿರ್ಧಾರ
ಸತೀಶ್ ನೀನಾಸಂ ಮತ್ತು ಶ್ರದ್ಧಾ ಶ್ರೀನಾಥ್ ನಟನೆಯಲ್ಲಿ ತಯಾರಾಗಿರುವ ಗೋದ್ರಾ ಸಿನಿಮಾದ ಹೆಸರು ಬದಲಿಸಲು ಚಿತ್ರತಂಡ ನಿರ್ಧರಿಸಿದೆ. ಸೆನ್ಸಾರ್ ಮಂಡಳಿಯ ಸೂಚನೆಯ ಬಳಿಕ ಹೆಸರು ಬದಲಿಸುವುದಾಗಿ ಚಿತ್ರತಂಡ ಮಾಹಿತಿ ನೀಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಟ ಸತೀಶ್ ನೀನಾಸಂ ''ಯಾರ ಭಾವನೆಗಳಿಗು ನೋವುಂಟು ಮಾಡುವ ಉದ್ದೇಶ ನಮಗಿಲ್ಲ, ಹಾಗಾಗಿ ಸೆನ್ಸಾರ್ ಮಂಡಳಿಯ ಅಭಿಪ್ರಾಯದಂತೆ "ಗೋದ್ರಾ" ಟೈಟಲ್ ಬದಲಾಯಿಸಲು ಒಪ್ಪಿದ್ದೇವೆ. ಶೀಘ್ರದಲ್ಲೇ ಹೊಸ ಟೈಟಲ್ ಘೋಷಣೆ... ಪ್ರೀತಿಯೊಂದಿಗೆ...'' ಎಂದಿದ್ದಾರೆ.
'ಗೋದ್ರಾ' ಚಿತ್ರದ ಹೆಸರು ಬದಲಿಸುವಂತೆ ಸೆನ್ಸಾರ್ ಮಂಡಳಿ ಸೂಚನೆ
ಇದಕ್ಕೂ ಮುಂಚೆ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಅಧಿಕಾರಿಗಳು ಚಿತ್ರ ಶೀರ್ಷಿಕೆ ಬದಲಿಸುವಂತೆ ಚಿತ್ರತಂಡಕ್ಕೆ ಸೂಚಿಸಿದ್ದರು. ಚಲನಚಿತ್ರ ವಾಣಿಜ್ಯ ಮಂಡಳಿ ನೋಂದಾಯಿತ ಟೈಟಲ್ ಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಸೆನ್ಸಾರ್ ಮಂಡಳಿ ಸ್ಪಷ್ಟ ಪಡಿಸಿತ್ತು.
'ಗೋದ್ರಾ' ಚಿತ್ರವನ್ನು ಕೆ.ಎಸ್.ನಂದೀಶ್ ನಿರ್ದೇಶನ ಮಾಡಿದ್ದಾರೆ. ಜಾಕೋಬ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗಿದೆ. ಸತೀಶ್ ನೀನಾಸಂ, ಶ್ರದ್ಧಾ ಜೊತೆ ವಸಿಷ್ಠಸಿಂಹ ಮತ್ತು ರಕ್ಷಾ ಸೋಮಶೇಖರ್ ಸಹ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
Recommended Video
'ಗೋಧ್ರಾ' ಎಂದಾಕ್ಷಣ ಕಣ್ಣೆದುರಿಗೆ ಬರುವುದು ಗುಜರಾತ್ನ ಗೋಧ್ರಾ ಹತ್ಯಾಕಾಂಡ, ಆದರೆ ಆ ಗೋಧ್ರಾಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಿರ್ದೇಶಕ ಸತೀಶ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. 'ಗೋಧ್ರಾ ಎಂಬುದು ಒಂದು ಊರಿನ ಹೆಸರು, ಅಲ್ಲಿ ನಡೆಯುವ ಒಂದು ಥ್ರಿಲ್ಲರ್ ಅಂಶ ಇಟ್ಟುಕೊಂಡು ನಿರ್ದೇಶಕ ನಂದೀಶ್ ಕಥೆ ಮಾಡಲಾಗಿದೆ ಎಂದು ತಿಳಿಸಿದ್ದರು.