Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಲಕಿ ಮೇಲೆ ಅತ್ಯಾಚಾರ ಕೊಲೆ ಖಂಡಿಸಿದ ನಟ ಸತೀಶ್ ನೀನಾಸಂ
ಕಬ್ಬು ಕಟಾವಿಗೆಂದು ಗದ್ದೆಗೆ ಬಂದಿದ್ದ ಬಾಲಕಿಯನ್ನು ಬಲವಂತವಾಗಿ ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನ ನಡೆಸಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
Recommended Video
12 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ದುಷ್ಕೃತ್ಯಕ್ಕೆ ನಟ ಸತೀಶ್ ನೀನಾಸಂ ಖಂಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಸತೀಶ್ ''ಅತ್ಯಾಚಾರದ ಬಗ್ಗೆ ಕೇಳಿ ಅಸಹ್ಯವಾಯಿತು'' ಎಂದಿದ್ದಾರೆ.
ಆಟೋ ಚಾಲಕರ ಜೊತೆ ಕನ್ನಡ ರಾಜ್ಯೋತ್ಸವ ಆಚರಿಸಿದ ಸತೀಶ್ ನೀನಾಸಂ
''ಮಂಡ್ಯ ಜಿಲ್ಲೆ, ಮದ್ದೂರ್ ತಾಲುಕು, "ಆರತಿ" ಮೇಲೆ ನಡೆದ ಅತ್ಯಾಚಾರದ ಬಗ್ಗೆ ಕೇಳಿ ಅಸಹ್ಯವಾಯಿತು. ಮನುಷ್ಯ ಸಂತತಿ ಬೆಳೆದಂತೆಲ್ಲ, ಅವನ ವಿಕೃತಿಗಳು ಹೆಚ್ಚುತ್ತಿವೆ. ಎಷ್ಟೇ ವಿದ್ಯಾವಂತರಾದರು ಹೆಣ್ಣಿಗೆ ರಕ್ಷಣೆ ಸಿಗುವಲ್ಲಿ ಸಮಾಜ ವಿಫಲವಾಗುತ್ತಿರುವುದು, ಈ ಭೂಮಿಯ ದುರಂತ'' ಎಂದು ಟ್ವಿಟ್ಟರ್ನಲ್ಲಿ ಕಿಡಿಕಾರಿದ್ದಾರೆ.
ಮದ್ದೂರಿನ ಹುರುಗಲ ವಾಡಿ ಗ್ರಾಮದ ರೈತ ಚೆಲುವರಾಜ್ ಅವರ ಕಬ್ಬಿನ ಗದ್ದೆಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಮೂಲದ ಬಾಲಕಿ ಗದ್ದೆಯಲ್ಲಿ ಕಬ್ಬು ಕಟಾವು ಮಾಡಲು ಬಂದಿದ್ದಳು. ಈ ವೇಳೆ ಆಕೆಯನ್ನು ಹೊತ್ತೊಯ್ದು ಅತ್ಯಾಚಾರಕ್ಕೆ ಯತ್ನಿಸಿ ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಮೃತ ಬಾಲಕಿಯ ದೇಹವನ್ನು ಅಂತ್ಯ ಸಂಸ್ಕಾರಕ್ಕೆಂದು ಇಂದು ಹೊಸಪೇಟೆಯ ಮೂಲ ಊರಿಗೆ ತೆಗೆದುಕೊಂಡು ಬರಲಾಗಿದೆ. ಈ ವೇಳೆ ಊರಿನ ಗ್ರಾಮಸ್ಥರು ಬಾಲಕಿ ಶವವನ್ನು ಮುಂದಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದರು. ನಂತರ ಸ್ಥಳಕ್ಕೆ ಡಿಸಿ ನಕುಲ್ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಕೆಗೆ ಪ್ರಯತ್ನಿಸಿದರು.