Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊರೊನಾ ಸಂಕಷ್ಟ; ಬಡವರ ಹಸಿವು ನೀಗಿಸಲು ಬೀದಿಗಿಳಿದ ಸತೀಶ್ ನೀನಾಸಂ
ಕೊರೊನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಜನರ ಸಹಾಯಕ್ಕೆ ಸ್ಯಾಂಡಲ್ ವುಡ್ ಮಂದಿ ಮುಂದಾಗಿದ್ದಾರೆ. ಕನ್ನಡ ಚಿತ್ರರಂಗದ ಅನೇಕ ಮಂದಿ ಈಗಾಗಲೇ ಸಾಕಷ್ಟು ಮಂದಿಗೆ ನೆರವಾಗಿದ್ದಾರೆ. ಅನೇಕ ಸ್ಟಾರ್ ಕಲಾವಿದರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುತ್ತಿರುವ ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.
ಒಂದೆಡೆ ಆಕ್ಸಿಜನ್, ಬೆಡ್, ಚಿಕಿತ್ಸೆ ಸಿಗದೆ ಪರದಾಡುತ್ತಿರುವ ಜನ ಮತ್ತೊಂದೆಡೆ ಕೆಲಸವಿಲ್ಲದೆ ಊಟಕ್ಕೂ ಪರದಾಡುತ್ತಿರುವವರು. ದೇಶದಲ್ಲಿ ಎದುರಾಗಿರುವ ಭೀಕರ ಪರಿಸ್ಥಿತಿ ವಿರುದ್ಧ ಹೋರಾಡಲು ಅನೇಕರು ಕೈ ಜೋಡಿದ್ದಾರೆ. ಅದರಲ್ಲೂ ಸಾಕಷ್ಟು ಮಂದಿ ಸಿನಿ ಕಲಾವಿದರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ.
ಕೊರೊನಾ ಸಂಕಷ್ಟ; ನೆರವಿಗೆ ನಿಂತ 'ಮಜಾ ಟಾಕೀಸ್' ರೆಮೋ
ಇದೀಗ ಸ್ಯಾಂಡಲ್ ವುಡ್ ನಟ ಸತೀಶ್ ನೀನಾಸಂ ಕೂಡ ಬೀದಿಗಿಳಿದಿದ್ದಾರೆ. ಒಂದೊಳ್ಳೆ ಕಾರಣಕ್ಕೆ ಬೀದಿಗಿಳಿದಿರುವುದಾಗಿ ಹೇಳಿದ್ದಾರೆ. ಸಂಕಷ್ಟದಲ್ಲಿರುವ ಜನರಿಗೆ ಆಹಾರ ವಿತರಿಸುವ ಮೂಲಕ ಸತೀಶ್ ಒಂದಿಷ್ಟು ಮಂದಿಯ ಹಸಿವು ನೀಗಿಸುವ ಕೆಲಸ ಮಾಡುತ್ತಿದ್ದಾರೆ.
ಪ್ರತಿನಿತ್ಯ ಸಾವಿರಾರು ಮಂದಿಗೆ ಆಹಾರ ವಿತರಣೆ ಮಾಡುತ್ತಿದ್ದಾರೆ. ಗಾಂಧಿ ಬಜಾರ್ ಸುತ್ತಮುತ್ತ ಆಹಾರ ವಿತರಿಸುತ್ತಿದ್ದಾರೆ. ಗಾಡಿ ವ್ಯಾಪಾರಿಗಳು, ಬಡವರು ಹಾಗೂ ನಿರ್ಗತಿಕರಿಗೆ ಸತೀಶ್ ಆಹಾರ ವಿತರಿಸಿದ್ದಾರೆ. ಸತೀಶ್ ಮಾನವೀಯ ಕೆಲಸಕ್ಕೆ ಅವರ ಸ್ನೇಹಿತರು ಕೈ ಜೋಡಿಸಿದ್ದಾರೆ.
Recommended Video
ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ಅನೇಕ ಮಂದಿ ಮಾನವೀಯ ಕೆಲಸ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್, ಉಪೇಂದ್ರ, ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಕಿರಣ್ ರಾಜ್, ಕವಿರಾಜ್, ಸಂಚಾರಿ ವಿಜಯ್ ಸೇರಿದಂತೆ ಸಾಕಷ್ಟು ಮಂದಿ ಸಂಕಷ್ಟದಲ್ಲಿರೋರಿಗೆ ನೆರವಾಗಿದ್ದಾರೆ.