Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಲ್ಲಾ ಸನ್ಮಾನಗಳು ನಿನಗೆ ನಿನ್ನಿಂದಲೇ': ಸತೀಶ್ ನೀನಾಸಂ
ಸ್ಯಾಂಡಲ್ ವುಡ್ ನಟ ನೀನಾಸಂ ಸತೀಶ್ ಸದ್ಯ 'ಬ್ರಹ್ಮಚಾರಿ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಕ್ವಾಟ್ಲೆ ಸತೀಶ್ ಸಂತಸದ ಅಲೆಯಲ್ಲಿ ತೇಲುತ್ತಿದ್ದಾರೆ. ತನ್ನ ಜೀವನದ ಖುಷಿ, ಯಶಸ್ಸು, ಗೌರವ ಮತ್ತು ಸಲ್ಮಾನಗಳನ್ನು ಸತೀಶ್ ಪ್ರಮುಖ ವ್ಯಕ್ತಿಗೆ ಅರ್ಪಿಸಿದ್ದಾರೆ.
ಹೌದು, ಅದು ಮತ್ಯಾರು ಅಲ್ಲ ಸತೀಶ್ ತಾಯಿ. ಅಮ್ಮನಿಗೆ ಸತೀಶ್ ವಿಶೇಷವಾದ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸತೀಶ್ ಅಭಿನಯದ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. 'ಬ್ಯೂಟಿಫುಲ್ ಮನಸುಗಳು', 'ಅಯೋಗ್ಯ' ಮತ್ತು 'ಚಂಬಲ್' ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಸಪ್ಪೆಯಾಗಿದ್ದ ಸತೀಶ್ ಸಿನಿ ಜೀವನವೀಗ ರಂಗೇರಿದೆ.
'ಬ್ರಹ್ಮಚಾರಿ' ಸತೀಶ್ ನೀನಾಸಂಗೆ ಜೊತೆಯಾದ ದತ್ತಣ್ಣ
ಈ ಎಲ್ಲಾ ಯಶಸ್ಸಿಗೆ ಕಾರಣ ತಾಯಿ ಎಂದು ಅವರಿಗೆ ಗೌರವ ಸಲ್ಲಿದ್ದಾರೆ. ಅಮ್ಮನನ್ನು ಚೇರ್ ಮೇಲೆ ಕೂರಿಸಿ ದೊಡ್ಡ ಹೂವಿನ ಹಾರ ಹಾಕಿ ಅಭಿನಂದಿಸಿದ್ದಾರೆ. 'ಎಲ್ಲಾ ಸನ್ಮಾನಗಳು ನಿನಗೆ ನಿನ್ನಿಂದಲೇ' ಎಂದು ಬರೆದುಕೊಂಡು ಅಮ್ಮನ ಜೊತೆ ಇರುವ ಫೋಟೋವನ್ನು ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸತೀಶ್ ತಾಯಿಯ ಪ್ರೀತಿ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ.
ಸತೀಶ್ ಸದ್ಯ ಚಂದ್ರ ಮೋಹನ್ ನಿರ್ದೇಶನದ ಕಾಮಿಡಿ ಸಿನಿಮಾ 'ಬ್ರಹ್ಮಚಾರಿ' ಯಲ್ಲಿ ಅಭಿನಯಿಸುತ್ತಿದ್ದಾರೆ. ಸತೀಶ್ ಗೆ ನಾಯಕಿಯಾಗಿ ಅದಿತಿ ಪ್ರಬುದೇವ ಬಣ್ಣಹಚ್ಚಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಸತೀಶ್ 'ಬ್ರಹ್ಮಚಾರಿ' ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.