Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಲ್ಲಾ ಸನ್ಮಾನಗಳು ನಿನಗೆ ನಿನ್ನಿಂದಲೇ': ಸತೀಶ್ ನೀನಾಸಂ
ಸ್ಯಾಂಡಲ್ ವುಡ್ ನಟ ನೀನಾಸಂ ಸತೀಶ್ ಸದ್ಯ 'ಬ್ರಹ್ಮಚಾರಿ' ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಕ್ವಾಟ್ಲೆ ಸತೀಶ್ ಸಂತಸದ ಅಲೆಯಲ್ಲಿ ತೇಲುತ್ತಿದ್ದಾರೆ. ತನ್ನ ಜೀವನದ ಖುಷಿ, ಯಶಸ್ಸು, ಗೌರವ ಮತ್ತು ಸಲ್ಮಾನಗಳನ್ನು ಸತೀಶ್ ಪ್ರಮುಖ ವ್ಯಕ್ತಿಗೆ ಅರ್ಪಿಸಿದ್ದಾರೆ.
ಹೌದು, ಅದು ಮತ್ಯಾರು ಅಲ್ಲ ಸತೀಶ್ ತಾಯಿ. ಅಮ್ಮನಿಗೆ ಸತೀಶ್ ವಿಶೇಷವಾದ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸತೀಶ್ ಅಭಿನಯದ ಸಿನಿಮಾಗಳು ಸೂಪರ್ ಹಿಟ್ ಆಗುತ್ತಿವೆ. 'ಬ್ಯೂಟಿಫುಲ್ ಮನಸುಗಳು', 'ಅಯೋಗ್ಯ' ಮತ್ತು 'ಚಂಬಲ್' ಸಾಲು ಸಾಲು ಹಿಟ್ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಸಪ್ಪೆಯಾಗಿದ್ದ ಸತೀಶ್ ಸಿನಿ ಜೀವನವೀಗ ರಂಗೇರಿದೆ.
'ಬ್ರಹ್ಮಚಾರಿ' ಸತೀಶ್ ನೀನಾಸಂಗೆ ಜೊತೆಯಾದ ದತ್ತಣ್ಣ
ಈ ಎಲ್ಲಾ ಯಶಸ್ಸಿಗೆ ಕಾರಣ ತಾಯಿ ಎಂದು ಅವರಿಗೆ ಗೌರವ ಸಲ್ಲಿದ್ದಾರೆ. ಅಮ್ಮನನ್ನು ಚೇರ್ ಮೇಲೆ ಕೂರಿಸಿ ದೊಡ್ಡ ಹೂವಿನ ಹಾರ ಹಾಕಿ ಅಭಿನಂದಿಸಿದ್ದಾರೆ. 'ಎಲ್ಲಾ ಸನ್ಮಾನಗಳು ನಿನಗೆ ನಿನ್ನಿಂದಲೇ' ಎಂದು ಬರೆದುಕೊಂಡು ಅಮ್ಮನ ಜೊತೆ ಇರುವ ಫೋಟೋವನ್ನು ಇನ್ಸ್ಟಾ ಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸತೀಶ್ ತಾಯಿಯ ಪ್ರೀತಿ ಕಂಡು ಅಭಿಮಾನಿಗಳು ಬೆರಗಾಗಿದ್ದಾರೆ.
ಸತೀಶ್ ಸದ್ಯ ಚಂದ್ರ ಮೋಹನ್ ನಿರ್ದೇಶನದ ಕಾಮಿಡಿ ಸಿನಿಮಾ 'ಬ್ರಹ್ಮಚಾರಿ' ಯಲ್ಲಿ ಅಭಿನಯಿಸುತ್ತಿದ್ದಾರೆ. ಸತೀಶ್ ಗೆ ನಾಯಕಿಯಾಗಿ ಅದಿತಿ ಪ್ರಬುದೇವ ಬಣ್ಣಹಚ್ಚಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಿರುವ ಸತೀಶ್ 'ಬ್ರಹ್ಮಚಾರಿ' ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.