Don't Miss!
- News ಕುಡಿಯುವ ನೀರಿಲ್ಲದೇ ಜನ ಬೆಂಗಳೂರಿಗೆ ಬಾಯ್ ಹೇಳುತ್ತಿದ್ದಾರೆ: ಆರ್.ಅಶೋಕ್
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇದೇ ತಿಂಗಳು ಬರ್ತಿದ್ದಾನೆ 'ಬ್ರಹ್ಮಾಚಾರಿ': ಹೊಟ್ಟೆಹುಣ್ಣಾಗುವಂತೆ ನಕ್ಕರೆ ಸತೀಶ್ ಜವಾಬ್ದಾರಿ ಅಲ್ವಂತೆ
ಸ್ಯಾಂಡಲ್ ವುಡ್ ಕ್ವಾಟ್ಲೆ ಸತೀಶ್ ಅಭಿನಯದ ಬಹು ನಿರೀಕ್ಷೆಯ 'ಬ್ರಹ್ಮಾಚಾರಿ' ಸಿನಿಮಾ ಇದೇ ತಿಂಗಳು ತೆರೆಗೆ ಬರಲು ಸಜ್ಜಾಗಿದೆ. ಟ್ರೈಲರ್ ಮೂಲಕ ಭಾರಿ ಕುತೂಹಲ ಮೂಡಿಸಿದ್ದ 'ಬ್ರಹ್ಮಾಚಾರಿ'ಯನ್ನು ನೋಡಲು ಚಿತ್ರಾಭಿಮಾನಿಗಳು ಕಾತರರಾಗಿದ್ದರು. ಯಾವಾಗ ತೆರೆಗೆ ಬರುತ್ತೆ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಸತೀಶ್ ಕಡೆಯಿಂದ ಸಿಹಿ ಸುದ್ದಿ ಸಿಕ್ಕಿದೆ.
'ಬ್ರಹ್ಮಾಚಾರಿ' ಇದೆ ತಿಂಗಳು ನವೆಂಬರ್ 29ಕ್ಕೆ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಬಹಿರಂಗ ಪಡಿಸಿದೆ. 'ಹಿಡ್ಕ ಹಿಡ್ಕ ಒಸಿ....'ಎನ್ನುವ ಹಾಡಿನ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ 'ಬ್ರಹ್ಮಾಚಾರಿ' ಈಗ ಅಭಿಮಾನಿಗಳ ಮುಂದೆ ಬರುತ್ತಿದೆ.
ನಟ ಸತೀಶ್ ಇಲ್ಲಿ ಮದುವೆಯಾದ ಬ್ರಹ್ಮಚಾರಿಯಾಗಿ ಕಾಣಿಸಿಕೊಂಡಿದ್ದಾರೆ. ಸತೀಸ್ ಪತ್ನಿಯ ಪಾತ್ರದಲ್ಲಿ ನಟಿ ಅದಿತಿ ಪ್ರಭುದೇವ ಕಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಚಂದ್ರ ಮೋಹನ್ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರಕ್ಕೆ ಉದಯ್ ಮೆಹ್ತಾ ಬಂಡವಾಳ ಹೂಡಿದ್ದಾರೆ. ಧರ್ಮ ವಿಶ್ ಸಂಗೀತ ಚಿತ್ರಕ್ಕಿದೆ.
ಲಂಡನ್ ನಲ್ಲಿ ಕನ್ನಡ ನಟ ಸತೀಶ್ ನೀನಾಸಂಗೆ ಏನು ಕೆಲಸ.?
ನಟ ಸತೀಶ್ ಸದ್ಯ 'ವೈತರಣಿ' ಚಿತ್ರಣದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕಾಗಿ ಲಂಡನ್ ನಲ್ಲಿ ಬೀಡುಬಿಟ್ಟಿದ್ದಾರೆ. ಸತೀಶ್ ಅಲ್ಲಿಂದನೆ ಚಿತ್ರ ನೋಡುವಂತೆ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ. "ನವೆಂಬರ್ 29ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಹೊಟ್ಟೆಹುಣ್ಣಾಗುವಂತೆ ನಕ್ಕರೆ ನಾವು ಜವಾಬ್ದಾರರಲ್ಲ" ಎಂದು ಹೇಳಿದ್ದಾರೆ. ಅಂದ್ಮೇಲೆ ಚಿತ್ರದಲ್ಲಿ ಸಖತ್ ಕಾಮಿಡಿ ನಿರೀಕ್ಷೆ ಮಾಡಬಹುದು.