Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
12 ದಿನದಲ್ಲಿ 'ಪೆಟ್ರೋಮ್ಯಾಕ್ಸ್' ಮೊದಲ ಹಂತದ ಚಿತ್ರೀಕರಣ ಮುಕ್ತಾಯ
ಸತೀಶ್ ನೀನಾಸಂ ಮತ್ತು 'ನೀರ್ದೋಸೆ' ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ತಯಾರಾಗುತ್ತಿರುವ 'ಪೆಟ್ರೋಮ್ಯಾಕ್ಸ್' ಚಿತ್ರದ ಮೊದಲ ಹಂತದ ಶೂಟಿಂಗ್ ಮುಗಿಸಿದೆ.
ಕಳೆದ ಎರಡು ವಾರಗಳಿಂದ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಕೇವಲ 12 ದಿನದಲ್ಲಿ ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಕ್ತಾಯವಾಗಿದೆ ಎಂದು ಸ್ವತಃ ಚಿತ್ರತಂಡ ಸಂತಸ ಹಂಚಿಕೊಂಡಿದೆ.
ಮೈಸೂರಿನಲ್ಲಿ 'ಪೆಟ್ರೋಮ್ಯಾಕ್ಸ್' ಹಿಡಿದು ಓಡಾಡುತ್ತಿರುವ ಸತೀಶ್ ಮತ್ತು ಹರಿಪ್ರಿಯಾ
ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಕಲಾವಿದರಿಗೆ ನಿರ್ದೇಶಕ ವಿಜಯ್ ಪ್ರಸಾದ್ ಖುಷಿಯಿಂದ ಬೀಳ್ಕೊಡುಗೆ ನೀಡಿದ್ದಾರೆ. ಮೊದಲ ಹಂತದ ಶೂಟಿಂಗ್ನಲ್ಲಿ ಸತೀಶ್ ನೀನಾಸಂ, ಹರಿಪ್ರಿಯಾ, ನಾಗಭೂಷಣ, ಕಾರುಣ್ ರಾಮ್ ಭಾಗವಹಿಸಿದ್ದರು.
ಸತೀಶ್ ನೀನಾಸಂ ನಾಯಕರಾಗಿರುವ ಈ ಚಿತ್ರದಲ್ಲಿ ಹರಿಪ್ರಿಯಾ ನಾಯಕಿಯಾಗಿದ್ದಾರೆ. ಕಾರುಣ್ ರಾಮ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
Recommended Video
ಅಂದ್ಹಾಗೆ, ವಿಜಯ್ ಪ್ರಸಾದ್ ಬಹಳ ಹಿಂದೆಯೇ 'ಪೆಟ್ರೋಮ್ಯಾಕ್ಸ್' ಸಿನಿಮಾ ಘೋಷಣೆ ಮಾಡಿದ್ದರು. 'ಸಿದ್ಲಿಂಗು' ಸಿನಿಮಾ ರಿಲೀಸ್ ಆದ ಬಳಿಕ ಈ ಸಿನಿಮಾ ಮಾಡುವುದಾಗಿ ಹೇಳಿದ್ದರು. ಆದರೆ ಅಲ್ಲಿಗೆ ನಿಂತುಹೋಗಿತ್ತು. ಬಳಿಕ ವಿಜಯ್ ಪ್ರಸಾದ್ 'ಪರಿಮಳ ಲಾಡ್ಜ್' ಸಿನಿಮಾ ಅನೌನ್ಸ್ ಮಾಡಿದ್ರು. ಅಲ್ಲದೆ ಟೀಸರ್ ಅನ್ನು ರಿಲೀಸ್ ಮಾಡಿದ್ದಾರೆ. ಇದೀಗ 'ಪರಿಮಳ ಲಾಡ್ಜ್' ಟೇಕಾಫ್ ಆಗುವ ಮೊದಲೇ ಪೆಟ್ರೇಮ್ಯಾಕ್ಸ್ ಸಿನಿಮಾ ಪ್ರಾರಂಭಿಸಿದ್ದಾರೆ.