Don't Miss!
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- News ಬೆಳಗಾವಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿಸಿಪಿ ಅಣ್ಣಾಮಲೈ ರಾಜೀನಾಮೆ ಕುರಿತು ಸತೀಶ್ ನೀನಾಸಂ ಬೇಸರ
'ಕರ್ನಾಟಕ ಸಿಂಗಂ' ಎಂದೇ ಗುರುತಿಸಿಕೊಂಡಿದ್ದ ದಕ್ಷ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ರಾಜೀನಾಮೆ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರನ್ನ ಭೇಟಿ ನೀಡಿ ರಾಜೀನಾಮೆ ಸಲ್ಲಿಸಿರುವುದಾಗಿ ಖುದ್ದು ಅವರೇ ತಿಳಿಸಿದ್ದಾರೆ.
ಅಣ್ಣಾಮಲೈ ರಾಜೀನಾಮೆ ನೀಡಿರುವ ವಿಚಾರ ತಿಳಿಯುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಒಬ್ಬ ಪ್ರಮಾಣಿಕ ಅಧಿಕಾರಿಯಾಗಿ ಜನರ ಮೆಚ್ಚುಗೆ ಪಡೆದುಕೊಂಡಿದ್ದ ಅಣ್ಣಾಮಲೈ ರಾಜೀನಾಮೆ ನೀಡಬಾರದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ
ಇದೇ ಬೇಸರವನ್ನ ನಟ ಸತೀಶ್ ನೀನಾಸಂ ಕೂಡ ವ್ಯಕ್ತಪಡಿಸಿದ್ದಾರೆ. ವೈಯಕ್ತಿಕವಾಗಿ ಅಣ್ಣಾಮಲೈ ರಾಜೀನಾಮೆ ನೀಡಿರುವುದು ಬೇಸರ ತಂದಿದೆ ಎಂದು ಟ್ವೀಟ್ ಮಾಡಿ ಅವರ ಮುಂದಿನ ಜೀವನಕ್ಕೆ ಶುಭಕೋರಿದ್ದಾರೆ.
ಬೆಂಗಳೂರು ದಕ್ಷಿಣ ನೂತನ ಡೆಪ್ಯೂಟಿ ಕಮಿಷನರ್, ಐಪಿಎಸ್, ಕೆ ಅಣ್ಣಾಮಲೈ ಸಂದರ್ಶನ
''ಕರ್ನಾಟಕ ಕಂಡ ಒಬ್ಬ ನಿಷ್ಟಾವಂತ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿರುವುದು ಒಬ್ಬ ಪ್ರಜೆಯಾಗಿ ಬೇಸರವಾಗಿದೆ. ನಿಮ್ಮಂತಹ ಅಧಿಕಾರಿಗಳ ಸೇವೆ ಬರೀ ಕರ್ನಾಟಕವಲ್ಲ ದೇಶಕ್ಕೆ ಅವಶ್ಯಕತೆಯಿದೆ. ಆದರೂ ನಿಮ್ಮ ವೈಯಕ್ತಿಕ ನಿರ್ಧಾರಗಳು ಅಷ್ಟೇ ಮುಖ್ಯ. ನಿಮ್ಮ ಜೀವನ ಸುಖವಾಗಿರಲಿ, ಶುಭಾಶಯಗಳು ಥ್ಯಾಂಕ್ಯು ಸರ್'' ಎಂದು ಸತೀಶ್ ನೀನಾಸಂ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಕಂಡ ಒಬ್ಬ ನಿಷ್ಟಾವಂತ ಅಧಿಕಾರಿ ಅಣ್ಣಾಮಲೈ ರಾಜೀನಾಮೆ ನೀಡಿರುವುದು ಒಬ್ಬ ಪ್ರಜೆಯಾಗಿ ಬೇಸರವಾಗಿದೆ. ನಿಮ್ಮಂತಹ ಅಧಿಕಾರಿಗಳ ಸೇವೆ ಬರೀ ಕರ್ನಾಟಕವಲ್ಲ ದೇಶಕ್ಕೆ ಅವಶ್ಯಕತೆಯಿದೆ. ಆದರೂ ನಿಮ್ಮ ವೈಯಕ್ತಿಕ ನಿರ್ಧಾರಗಳು ಅಷ್ಟೇ ಮುಖ್ಯ. ನಿಮ್ಮ ಜೀವನ ಸುಖವಾಗಿರಲಿ, ಶುಭಾಶಯಗಳು ಥ್ಯಾಂಕ್ಯು ಸರ್ pic.twitter.com/4kTsrFW05K
— Sathish Ninasam (@SathishNinasam) May 28, 2019
ಐಪಿಎಸ್ ಅಧಿಕಾರಿ ಅಣ್ಣಾಮಲೈ ಜನರಿಗೆ ಬರೆದ ಭಾವನಾತ್ಮಕ ಪತ್ರದಲ್ಲಿ ಏನಿದೆ?
2011ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಾರ್ಕಳ, ಚಿಕ್ಕಮಗಳೂರು ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಸಿಎಂ ಕುಮಾರಸ್ವಾಮಿ ಅವರೇ ಖುದ್ದು ಬೆಂಗಳೂರಿಗೆ ವರ್ಗಾವಣೆ ಮಾಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದ್ದರು. ಬೆಂಗಳೂರು ದಕ್ಷಿಣ ವಿಭಾದ ಡಿಸಿಪಿ ಆಗಿ ಅಣ್ಣಾಮಲೈ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ, ರಾಜೀನಾಮೆ ನೀಡಿ ತಮ್ಮ ವೈಯಕ್ತಿಕ ಆಲೋಚನೆ ಮತ್ತು ಜೀವನದ ಬಗ್ಗೆ ಕಾಳಜಿ ವಹಿಸುವುದಾಗಿ ಹೇಳಿದ್ದಾರೆ.