Don't Miss!
- News ಮೋದಿ ಯಾರ ಪರ; ಪ್ರಧಾನಿಯಾಗಿ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದು ಯಾರದ್ದು? ಸಿದ್ದರಾಮಯ್ಯ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರಿನಲ್ಲಿ 'ಪೆಟ್ರೋಮ್ಯಾಕ್ಸ್' ಹಿಡಿದು ಓಡಾಡುತ್ತಿರುವ ಸತೀಶ್ ಮತ್ತು ಹರಿಪ್ರಿಯಾ
ನಟ ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ಇಬ್ಬರು ಜಗಮಗಿಸೋ ಮೈಸೂರಿನಲ್ಲಿ ಪೆಟ್ರೋಮ್ಯಾಕ್ಸ್ ಹಿಡಿದು ಓಡಾಡುತ್ತಿದ್ದಾರೆ. ಇಬ್ಬರು ಮೈಸೂರಿನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಂದ್ಹಾಗೆ ಇಬ್ಬರು ಮೈಸೂರು ದಸರಾಗೆ ಹೋಗಿದ್ದಾರೆ ಅಂತ ಯೋಚಿಸಬೇಡಿ, ಹೊಸ ಸಿನಿಮಾದ ಚಿತ್ರೀಕರಣಕ್ಕಾಗಿ ಸತೀಶ್ ಮತ್ತು ಹರಿಪ್ರಿಯಾ ಮೈಸೂರಿನಲ್ಲಿದ್ದಾರೆ.
ಹೌದು, ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದೆ. ದಸರಾ ಸಂಭ್ರಮದ ನಡುವೆಯೂ ಪೆಟ್ರೋಮ್ಯಾಕ್ಸ್ ಟೀಂ ಮೈಸೂರಿನಲ್ಲಿ ಚಿತ್ರೀಕರಣ ಮಾಡುತ್ತಿದೆ. ಮೊದಲ ದಿನದ ಚಿತ್ರೀಕರಣದ ಫೋಟೋವನ್ನು ಸತೀಶ್ ಮತ್ತು ಹರಿಪ್ರಿಯಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.
'ಪೆಟ್ರೋಮ್ಯಾಕ್ಸ್'ನಲ್ಲಿ ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ರೊಮ್ಯಾನ್
ಅಂದ್ಹಾಗೆ ಚಿತ್ರಕ್ಕೆ ನೀರ್ ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಕ್ಟೋಬರ್ 19ರಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಮೊದಲ ಬಾರಿಗೆ ನಟಿ ಹರಿಪ್ರಿಯಾ, ಸತೀಶ್ ಜೊತೆ ನಟಿಸುತ್ತಿದ್ದಾರೆ. ಈ ಬಗ್ಗೆ ಸತೀಶ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. 'ನಮ್ಮ ಪ್ರೀತಿಯ ವಿಜಯ್ ಪ್ರಸಾದ್ ಅವರ ನಿರ್ದೇಶನದ, ಪೆಟ್ರೋಮ್ಯಾಕ್ಸ್. ಹರಿಪ್ರಿಯಾ ಅವರು ಕನ್ನಡದ ಉತ್ತಮ ನಟಿಯರಲ್ಲಿ ಒಬ್ಬರು ಅವರ ಜೊತೆ ಮೊದಲ ಬಾರಿ ಕೆಲಸ ಮಾಡುತ್ತಿರುವುದು ಸಂತಸದ ವಿಷಯ' ಎಂದು ಹೇಳಿದ್ದಾರೆ.
ಅಂದ್ಹಾಗೆ ಹರಿಪ್ರಿಯಾ ಈ ಮೊದಲು ವಿಜಯ್ ಪ್ರಸಾದ್ ನಿರ್ದೇಶನದ ನೀರ್ ದೋಸೆ ಸಿನಿಮಾದಲ್ಲಿ ನಟಿಸಿದ್ದರು. ಕುಮುದಾ ಪಾತ್ರದ ಮೂಲಕ ಚಿತ್ರಪ್ರಿಯ ನಿದ್ದೆಗೆಡಿಸಿದ್ದರು. ಇದೀಗ ವಿಜಯ್ ಪ್ರಸಾದ್ ನಿರ್ದೇಶನದ ಎರಡನೇ ಸಿನಿಮಾದಲ್ಲಿ ಹರಿಪ್ರಿಯಾ ಕಾಣಿಸಿಕೊಳ್ಳುತ್ತಿರುವುದು ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ.
Recommended Video
ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಬರುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾ ಈ ಹಿಂದೆಯೆ ಅನೌನ್ಸ್ ಆಗಿತ್ತು. ಸಿದ್ಲಿಂಗು ಸಿನಿಮಾ ರಿಲೀಸ್ ಆದ ಬಳಿಕ ಈ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಅಲ್ಲಿಗೆ ನಿಂತುಹೋಗಿತ್ತು. ಬಳಿಕ ವಿಜಯ್ ಪ್ರಸಾದ್ ಪರಿಮಳ ಲಾಡ್ಜ್ ಸಿನಿಮಾ ಅನೌನ್ಸ್ ಮಾಡಿದ್ರು. ಅಲ್ಲದೆ ಟೀಸರ್ ಅನ್ನು ರಿಲೀಸ್ ಮಾಡಿದ್ದಾರೆ. ಇದೀಗ 'ಪರಿಮಳ ಲಾಡ್ಜ್' ಟೇಕಾಫ್ ಆಗುವ ಮೊದಲೇ ಪೆಟ್ರೇಮ್ಯಾಕ್ಸ್ ಸಿನಿಮಾ ಪ್ರಾರಂಭಿಸಿದ್ದಾರೆ.