Don't Miss!
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- News Mysuru: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್, ಕಾರಣ ಇಲ್ಲಿದೆ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
Recommended Video
ಬರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಆಗಿರುವ ಪರಿಸ್ಥಿತಿಗೆ ಕರ್ನಾಟಕದ ಇತರ ಭಾಗದ ಜನರು ಸ್ಪಂದಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಕೂಡ ನೆರೆ ಸಂತ್ರಸ್ಥರಿಗೆ ಸಹಾಯ ಮಾಡಿದ್ದಾರೆ. ಈಗ ಹಿರಿಯ ನಟಿ ಲೀಲಾವತಿ ಸಹ ಜನರ ನೆರವಿಗೆ ಬಂದಿದ್ದಾರೆ.
ಮಳೆಯಿಂದ ಜನರು ಮಾತ್ರವಲ್ಲದೆ ಜಾನುವಾರುಗಳ ಬದುಕು ಕೆಟ್ಟದಾಗಿದೆ. ಇದನ್ನು ನೋಡಿ ದುಃಖದಲ್ಲಿ ಇದ್ದ ಅವರು, ತಮ್ಮ ಕೈನಲ್ಲಿ ಆದ ಸಹಾಯವನ್ನು ಮಾಡಬೇಕು ಎಂದು ನಿರ್ಧಾರ ಮಾಡಿದರು.
ಹೀಗಾಗಿ, ಜಾನುವಾರುಗಳಿಗಾಗಿ ಒಂದು ಲಾರಿಯಲ್ಲಿ ಮೇವನ್ನು ಲೀಲಾವತಿ ಕಳಹಿಸಿಕೊಟ್ಟಿದ್ದಾರೆ. ಮುಸುಕಿನ ಜೋಳದ ಮೇವನ್ನು ತಮ್ಮ ಸ್ವತಃ ಹಣದಿಂದ ಖರೀದಿ ಮಾಡಿ ಉತ್ತರ ಕರ್ನಾಟಕಕ್ಕೆ ರವಾನೆ ಮಾಡಿದ್ದಾರೆ.
ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನ ಹಳ್ಳಿ ವಾಸವಾಗಿದ್ದಾರೆ. ಅಲ್ಲಿನ ರೈತರಿಂದಲೇ ಮೇವನ್ನು ಖರೀದಿ ಮಾಡಿ, ನೆರೆ ಸಂತ್ರಸ್ಥರಿಗೆ ತಲುಪಿಸಿದ್ದಾರೆ. ತಾವೇ ತಮ್ಮ ಕೈಯಾರ ಲಾರಿಗೆ ಮೇವನ್ನು ತುಂಬಿಸಿದ್ದಾರೆ.
ಮಳೆ ಕಡಿಮೆ ಆಗಿ ಉತ್ತರ ಕರ್ನಾಟಕದ ಪರಿಸ್ಥಿತಿ ಆದಷ್ಟು ಬೇಗ ಸಹಜ ಸ್ಥಿತಿಗೆ ಬರಲಿ ಎಂದು ಲೀಲಾವತಿ ಪ್ರಾರ್ಥನೆ ಮಾಡಿದ್ದಾರೆ.