Don't Miss!
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೀಡಿದ ನಟಿ ಲೀಲಾವತಿ
Recommended Video
ಬರೀ ಮಳೆಯಿಂದ ಉತ್ತರ ಕರ್ನಾಟಕದಲ್ಲಿ ಆಗಿರುವ ಪರಿಸ್ಥಿತಿಗೆ ಕರ್ನಾಟಕದ ಇತರ ಭಾಗದ ಜನರು ಸ್ಪಂದಿಸುತ್ತಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಕೂಡ ನೆರೆ ಸಂತ್ರಸ್ಥರಿಗೆ ಸಹಾಯ ಮಾಡಿದ್ದಾರೆ. ಈಗ ಹಿರಿಯ ನಟಿ ಲೀಲಾವತಿ ಸಹ ಜನರ ನೆರವಿಗೆ ಬಂದಿದ್ದಾರೆ.
ಮಳೆಯಿಂದ ಜನರು ಮಾತ್ರವಲ್ಲದೆ ಜಾನುವಾರುಗಳ ಬದುಕು ಕೆಟ್ಟದಾಗಿದೆ. ಇದನ್ನು ನೋಡಿ ದುಃಖದಲ್ಲಿ ಇದ್ದ ಅವರು, ತಮ್ಮ ಕೈನಲ್ಲಿ ಆದ ಸಹಾಯವನ್ನು ಮಾಡಬೇಕು ಎಂದು ನಿರ್ಧಾರ ಮಾಡಿದರು.
ಹೀಗಾಗಿ, ಜಾನುವಾರುಗಳಿಗಾಗಿ ಒಂದು ಲಾರಿಯಲ್ಲಿ ಮೇವನ್ನು ಲೀಲಾವತಿ ಕಳಹಿಸಿಕೊಟ್ಟಿದ್ದಾರೆ. ಮುಸುಕಿನ ಜೋಳದ ಮೇವನ್ನು ತಮ್ಮ ಸ್ವತಃ ಹಣದಿಂದ ಖರೀದಿ ಮಾಡಿ ಉತ್ತರ ಕರ್ನಾಟಕಕ್ಕೆ ರವಾನೆ ಮಾಡಿದ್ದಾರೆ.
ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಬೆಂಗಳೂರಿನ ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನ ಹಳ್ಳಿ ವಾಸವಾಗಿದ್ದಾರೆ. ಅಲ್ಲಿನ ರೈತರಿಂದಲೇ ಮೇವನ್ನು ಖರೀದಿ ಮಾಡಿ, ನೆರೆ ಸಂತ್ರಸ್ಥರಿಗೆ ತಲುಪಿಸಿದ್ದಾರೆ. ತಾವೇ ತಮ್ಮ ಕೈಯಾರ ಲಾರಿಗೆ ಮೇವನ್ನು ತುಂಬಿಸಿದ್ದಾರೆ.
ಮಳೆ ಕಡಿಮೆ ಆಗಿ ಉತ್ತರ ಕರ್ನಾಟಕದ ಪರಿಸ್ಥಿತಿ ಆದಷ್ಟು ಬೇಗ ಸಹಜ ಸ್ಥಿತಿಗೆ ಬರಲಿ ಎಂದು ಲೀಲಾವತಿ ಪ್ರಾರ್ಥನೆ ಮಾಡಿದ್ದಾರೆ.