Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿವಾದ ಹುಟ್ಟು ಹಾಕಿದ್ದ ರವಿಚಂದ್ರನ್ ಡೈಲಾಗ್ ಗೆ ಕತ್ತರಿ ಬಿತ್ತು
Recommended Video
ನಟ ರವಿಚಂದ್ರನ್ ಅವರ ಒಂದು ಡೈಲಾಗ್ ಇತ್ತೀಚಿಗಷ್ಟೆ ದೊಡ್ಡ ವಿವಾದ ಹುಟ್ಟುಹಾಕಿತ್ತು. 'ಸೀಜರ್' ಸಿನಿಮಾದ ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ರವಿಚಂದ್ರನ್ ಚಿತ್ರದಲ್ಲಿ ಹೇಳಿರುವ ಒಂದು ಡೈಲಾಗ್ ಅವರ ಅಸಮಾಧಾನಕ್ಕೆ ಕಾರಣ ಆಗಿತ್ತು.
''ಗೋ ಹತ್ಯೆ ಮಾಡುವುದು ಹೆತ್ತ ತಾಯಿಯ ತಲೆ ಹಿಡಿಯುವುದು ಎರಡೂ ಒಂದೇ'' ಎನ್ನುವ ಸಂಭಾಷಣೆಯನ್ನು ಚಿತ್ರದ ರವಿಚಂದ್ರನ್ ಪಾತ್ರ ಹೇಳುತ್ತದೆ. ಈ ಸಂಭಾಷಣೆ ಹೊರಬಂದ ಮೇಲೆ ಅನೇಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಸಿನಿಮಾದ ಒಂದು ಪಾತ್ರದಲ್ಲಿ ಅಭಿನಯಿಸಿದ್ದ ನಟ ಪ್ರಕಾಶ್ ರಾಜ್ ಕೂಡ ನಿರ್ದೇಶಕರ ವಿರುದ್ಧ ಗರಂ ಆಗಿದ್ದರು. ಈ ಸಂಭಾಷಣೆಯನ್ನು ತೆಗೆಯುವಂತೆ ಹೇಳಿದ್ದರು.
ಮೊದಲು ಆ ಸಂಭಾಷಣೆಯನ್ನು ಸಮರ್ಥನೆ ಮಾಡಿಕೊಂಡ ನಿರ್ದೇಶಕ ವಿನಯ್ ಕುಮಾರ್ ಈಗ ಅದನ್ನು ತೆಗೆದಿದ್ದಾರೆ. ರವಿಚಂದ್ರನ್ ಕೂಡ ಆ ಡೈಲಾಗ್ ತೆಗೆಯುವಂತೆ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಹೇಳಿದ್ದು, ಆ ಸಂಭಾಷಣೆಯನ್ನು ಮ್ಯೂಟ್ ಮಾಡಲಾಗಿದೆಯಂತೆ.
ಅಂದಹಾಗೆ, ಸೀಜರ್ ಸಿನಿಮಾದಲ್ಲಿ ನಟ ಚಿರಂಜೀವಿ ಸರ್ಜಾ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಪಾರೂಲ್ ಯಾದವ್ ನಾಯಕಿ ಆಗಿದ್ದಾರೆ. ಈ ಸಿನಿಮಾ ನಾಳೆ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ.