twitter
    For Quick Alerts
    ALLOW NOTIFICATIONS  
    For Daily Alerts

    ವಿವಾದ ಹುಟ್ಟು ಹಾಕಿದ್ದ ರವಿಚಂದ್ರನ್ ಡೈಲಾಗ್ ಗೆ ಕತ್ತರಿ ಬಿತ್ತು

    By Naveen
    |

    Recommended Video

    ವಿವಾದ ಸೃಷ್ಟಿಸಿದ ರವಿಚಂದ್ರನ್ ಹೇಳಿಕೆ | Filmibeat Kannada

    ನಟ ರವಿಚಂದ್ರನ್ ಅವರ ಒಂದು ಡೈಲಾಗ್ ಇತ್ತೀಚಿಗಷ್ಟೆ ದೊಡ್ಡ ವಿವಾದ ಹುಟ್ಟುಹಾಕಿತ್ತು. 'ಸೀಜರ್' ಸಿನಿಮಾದ ಒಂದು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ರವಿಚಂದ್ರನ್ ಚಿತ್ರದಲ್ಲಿ ಹೇಳಿರುವ ಒಂದು ಡೈಲಾಗ್ ಅವರ ಅಸಮಾಧಾನಕ್ಕೆ ಕಾರಣ ಆಗಿತ್ತು.

    ''ಗೋ ಹತ್ಯೆ ಮಾಡುವುದು ಹೆತ್ತ ತಾಯಿಯ ತಲೆ ಹಿಡಿಯುವುದು ಎರಡೂ ಒಂದೇ'' ಎನ್ನುವ ಸಂಭಾಷಣೆಯನ್ನು ಚಿತ್ರದ ರವಿಚಂದ್ರನ್ ಪಾತ್ರ ಹೇಳುತ್ತದೆ. ಈ ಸಂಭಾಷಣೆ ಹೊರಬಂದ ಮೇಲೆ ಅನೇಕರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಸಿನಿಮಾದ ಒಂದು ಪಾತ್ರದಲ್ಲಿ ಅಭಿನಯಿಸಿದ್ದ ನಟ ಪ್ರಕಾಶ್ ರಾಜ್ ಕೂಡ ನಿರ್ದೇಶಕರ ವಿರುದ್ಧ ಗರಂ ಆಗಿದ್ದರು. ಈ ಸಂಭಾಷಣೆಯನ್ನು ತೆಗೆಯುವಂತೆ ಹೇಳಿದ್ದರು.

    ಮೊದಲು ಆ ಸಂಭಾಷಣೆಯನ್ನು ಸಮರ್ಥನೆ ಮಾಡಿಕೊಂಡ ನಿರ್ದೇಶಕ ವಿನಯ್ ಕುಮಾರ್ ಈಗ ಅದನ್ನು ತೆಗೆದಿದ್ದಾರೆ. ರವಿಚಂದ್ರನ್ ಕೂಡ ಆ ಡೈಲಾಗ್ ತೆಗೆಯುವಂತೆ ನಿರ್ಮಾಪಕ ಮತ್ತು ನಿರ್ದೇಶಕರಿಗೆ ಹೇಳಿದ್ದು, ಆ ಸಂಭಾಷಣೆಯನ್ನು ಮ್ಯೂಟ್ ಮಾಡಲಾಗಿದೆಯಂತೆ.

    Seizer kannada movie Beef dialogue beeped.

    ಅಂದಹಾಗೆ, ಸೀಜರ್ ಸಿನಿಮಾದಲ್ಲಿ ನಟ ಚಿರಂಜೀವಿ ಸರ್ಜಾ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಅವರಿಗೆ ಪಾರೂಲ್ ಯಾದವ್ ನಾಯಕಿ ಆಗಿದ್ದಾರೆ. ಈ ಸಿನಿಮಾ ನಾಳೆ ರಾಜ್ಯಾದಂತ್ಯ ಬಿಡುಗಡೆಯಾಗುತ್ತಿದೆ.

    English summary
    Kannada actor Ravichandran's Seizer kannada movie controversial beef dialogue beeped.
    Thursday, April 12, 2018, 11:12
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X