Don't Miss!
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Automobiles ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
ಡಬ್ಬಿಂಗ್ ಸಿನಿಮಾ ಬಗ್ಗೆ ಚರ್ಚೆ ಇಂದು ನಿನ್ನೆಯದಲ್ಲ. ಮಂದಗಾಮಿನಿಯಾಗಿದ್ದ ಡಬ್ಬಿಂಗ್ ಚರ್ಚೆ, ನ್ಯಾಯಾಲಯದ ತೀರ್ಪಿನ ನಂತರ ಬಹಿರಂಗವಾಯಿತು. ಈಗ ಪರಿಸ್ಥಿತಿ ಬದಲಾಗಿದ್ದು, ಡಬ್ಬಿಂಗ್ ವಿರೋಧಿಸುವವರ ಸಂಖ್ಯೆ ವಿರಳವಾಗುತ್ತಾ ಹೋಗುತ್ತಿದೆ.
ಆದರೆ ಇನ್ನೂ ಹಲವರು ಡಬ್ಬಿಂಗ್ ವಿರುದ್ಧವಾಗಿ ತಮ್ಮ ದನಿಯನ್ನು ಎತ್ತುತ್ತಲೇ ಇದ್ದಾರೆ. ಇದೀಗ ಹಿರಿಯ ನಟ ದೊಡ್ಡಣ್ಣ ಅವರು ಡಬ್ಬಿಂಗ್ ಸಿನಿಮಾ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕ ಶಶಾಂಕ್ ಮಾಡಿದ 'ಡಬ್ಬಿಂಗ್' ಟ್ವೀಟ್ಗೆ ಭಾರಿ ವಿರೋಧ
ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದ ದೊಡ್ಡಣ್ಣ, 'ಡಬ್ಬಿಂಗ್ ಸಿನಿಮಾ ಎಂಬುದು ನೀರಿನ ಬಟ್ಟಲಲ್ಲಿ ಕೈಅದ್ದಿ ನೆಕ್ಕಿದಂತೆ' ಎಂದರು. ಅದೇ ಸ್ವಮೇಕ್ ಸಿನಿಮಾಗಳು ಪಾಯಸದ ಬಟ್ಟಲ್ಲಲ್ಲಿ ಕೈ ಅದ್ದಿದಂತೆ ಎಂದು ಉಪಮೇಯ ನೀಡಿದರು ದೊಡ್ಡಣ್ಣ.
ಕನ್ನಡ ಭಾಷೆಯ ಬಗ್ಗೆ ಮಾತನಾಡಿದ ದೊಡ್ಡಣ್ಣ, 'ಕನ್ನಡ ಎಂದರೆ ಹಡೆದವ್ವ. ಇಂಗ್ಲಿಷ್ ಭಾಷೆಯ ವ್ಯಾಮೋಹದಿಂದ ಕನ್ನಡದ ಹಿರಿಮೆ-ಗರಿಮೆ ಕಡಿಮೆ ಆಗುತ್ತಿದೆ, ಅದು ಸರಿಯಲ್ಲ. ಕನ್ನಡ ಭಾಷೆ, ಕನ್ನಡ ಶಾಲೆಗಳು ಉಳಿಯಬೇಕು' ಎಂದು ಕಾಳಜಿ ವ್ಯಕ್ತಪಡಿಸಿದರು.
ಕೊರೊನಾ ಉಂಟು ಮಾಡಿರುವ ಭೀತಿಯಿಂದ ಜನರು ಚಿತ್ರಮಂದಿರಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ದೊಡ್ಡ ಬಜೆಟ್ ಸಿನಿಮಾಗಳನ್ನು ಬಿಡುಗಡೆ ಮಾಡಲು ನಿರ್ಮಾಪಕರು ಸಹ ಹಿಂದೇಟು ಹಾಕುತ್ತಿದ್ದಾರೆ. ಪರಿಸ್ಥಿತಿ ಶೀಘ್ರವೇ ಸರಿ ಹೋಗಲಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ತೆಲುಗಿಗೆ ರಾಬರ್ಟ್: ದರ್ಶನ್ ಪಾತ್ರಕ್ಕೆ ಧ್ವನಿ ಕೊಡುವವರು ಯಾರು?
ತಮ್ಮ ಜೀವನ ಸಾಗಿ ಬಂದ ಹಾದಿ, ಸಿನಿಮಾದೊಂದಿಗೆ ನಂಟು, ಸಿನಿಮಾದ ಮುಂಚಿನ ಜೀವನ ಹೀಗೆ ಹಲವು ವಿಷಯಗಳ ಬಗ್ಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾಧ್ಯಮದವರೊಟ್ಟಿಗೆ ಮಾತನಾಡಿದರು ದೊಡ್ಡಣ್ಣ.