Don't Miss!
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Automobiles ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲ್ಮ್ ಚೇಂಬರ್ ಗೆ ಶ್ರುತಿ ವಿರುದ್ಧ ದೂರು ಕೊಟ್ಟ ಅರ್ಜುನ್ ಸರ್ಜಾ ಮಾವ ರಾಜೇಶ್
Recommended Video
ದಕ್ಷಿಣ ಭಾರತ ಚಿತ್ರರಂಗದಲ್ಲಿ 'ಸಂಭಾವಿತ' ಎಂದೇ ಗುರುತಿಸಿಕೊಂಡಿರುವ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಲೈಂಗಿಕ ಕಿರುಕುಳದ ಬಾಂಬ್ ಸಿಡಿಸಿದ್ದಾರೆ.
'ವಿಸ್ಮಯ' ಚಿತ್ರದ ರಿಹರ್ಸಲ್ ವೇಳೆ ಅರ್ಜುನ್ ಸರ್ಜಾ ಅಸಭ್ಯವಾಗಿ ವರ್ತಿಸಿದರು ಅನ್ನೋದು ಶ್ರುತಿ ಹರಿಹರನ್ ಆರೋಪ. ಅಲ್ಲದೇ, ಊಟಕ್ಕೆ ಹೋಗೋಣ ಬಾ.. ರೆಸಾರ್ಟ್ ಗೆ ಹೋಗೋಣ ಬಾ.. ಅಂತ ಅರ್ಜುನ್ ಸರ್ಜಾ ಆಹ್ವಾನ ಕೊಡ್ತಿದ್ರಂತೆ. ಎಲ್ಲದಕ್ಕೂ ಅಂದು 'ನೋ' ಎಂದಿದ್ದ ಶ್ರುತಿ ಹರಿಹರನ್ ಇಂದು ಅರ್ಜುನ್ ಸರ್ಜಾ ವಿರುದ್ಧ ಗುಡುಗಿದ್ದಾರೆ.
ಅರ್ಜುನ್ ಸರ್ಜಾ ಹೆಸರನ್ನ ಮಾತ್ರ ಹೇಳಲು ಒಂದು ಕಾರಣ ಇದೆ ಎಂದ ಶ್ರುತಿ ಹರಿಹರನ್.!
ಅರ್ಜುನ್ ಸರ್ಜಾ ಬಗ್ಗೆ ಆರೋಪಿಸಿರುವ ಶ್ರುತಿ ಹರಿಹರನ್ ವಿರುದ್ಧ ಹಿರಿಯ ನಟ, ಅರ್ಜುನ್ ಸರ್ಜಾ ಮಾವ ರಾಜೇಶ್ ಸಿಡಿದೆದ್ದಿದ್ದಾರೆ. ಸುಳ್ಳು ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಕೊಟ್ಟಿದ್ದಾರೆ.
ರಾಜೇಶ್ ಕೊಟ್ಟಿರುವ ದೂರಿನ ಅನುಸಾರ ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಫಿಲ್ಮ್ ಚೇಂಬರ್ ನಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಶ್ರುತಿ ಹರಿಹರನ್ ಭಾಗವಹಿಸುವ ಸಾಧ್ಯತೆ ಇದೆ.
ನನ್ನ ಮಗ ಇಲ್ಲದಿದ್ದಾಗ ಶ್ರುತಿ ಮನೆಗೆ ಬಂದಿದ್ದೇಕೆ.? ಸರ್ಜಾ ತಾಯಿ ಕೆಂಡಾಮಂಡಲ
''ಫಿಲ್ಮ್ ಚೇಂಬರ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ'' ಎಂದು ರಾಜೇಶ್ ತಿಳಿಸಿದ್ದಾರೆ. ಇಂದು ಸಭೆಯಲ್ಲಿ ಅಧ್ಯಕ್ಷ ಚಿನ್ನೇಗೌಡ ಯಾವ ನಿರ್ಧಾರ ಕೈಗೊಳ್ಳುತ್ತಾರೋ, ನೋಡಬೇಕು.