Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಹಿರಿಯ ಕಲಾವಿದರಿಂದ ಡಿಸಿಎಂಗೆ ಮನವಿ
ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡುವಂತೆ ಚಿತ್ರರಂಗದ ಹಿರಿಯ ಕಲಾವಿದರು ಡಿಸಿಎಂ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕರ್ನಾಟಕದಲ್ಲಿ ಈಗಾಗಲೆ ಧಾರಾವಾಹಿ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದ್ದು, ಚಿತ್ರೀಕರಣ ಪ್ರಾರಂಭವಾಗಿದೆ. ಆದರೆ ಹೀರಿಯ ಕಲಾವಿದರಿಗೆ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ. ಹಾಗಾಗಿ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾಗಿರುವ ಹಿರಿಯ ಕಲಾವಿದರು ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ.
Recommended Video
ಹಿರಿಯ ಕಲಾವಿದರಾದ ಡಿಂಗ್ರಿ ನಾಗರಾಜ್, ಲಕ್ಷ್ಮೀ ದೇವಮ್ಮ, ಶೋಭ ರಾಘವೇಂದ್ರ, ಮಂಜುಳಾ, ಗಣೇಶ್ ರಾವ್ ಸೇರಿದ್ದಂತೆ ಅನೇಕ ಕಲಾವಿದರು ಡಾ. ಅಶ್ವತ್ಥನಾರಾಯಣ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಚಿತ್ರೀಕರಣಕ್ಕೆ ಅನುಮತಿ ನೀಡಿದ ತೆಲಂಗಾಣ ಸರ್ಕಾರ
ಕಲಾವಿದರ ಸಮಸ್ಯೆ ಆಲಿಸಿದ ಡಿಸಿಎಂ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಸೂಕ್ತ ಕ್ರಮಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದರು. ಲಾಕ್ ಡೌನ್ ನಿಂದು ಸುಮಾರು 2 ತಿಂಗಳಿನಿಂದ ಚಿತ್ರೀಕರಣ ಸ್ಥಗಿತವಾಗಿದೆ. ಈಗಾಗಲೆ ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ ನೀಡಲಾಗಿದೆ. ಆದರೆ 60 ವರ್ಷ ಮೇಲ್ಪಟ್ಟ ಕಲಾವಿದರಿಗೆ ಚಿತ್ರೀಕರಣದಲ್ಲಿ ಭಾಗಿಯಾಗಲು ಅವಕಾಶವಿಲ್ಲ. ಹಾಗಾಗಿ ಹಿರಿಯ ಕಲಾವಿದರು ಸಂಪಾದನೆ ಇಲ್ಲದೆ ಪರದಾಡುವಂತಾಗಿದೆ. ಸಮಸ್ಯೆಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದೆ ಸಮಯದಲ್ಲಿ ಬೇರೆ ರಾಜ್ಯಗಳಲ್ಲಿ ಅಂದರೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಹಿರಿಯ ಕಲಾವಿದರು ಮತ್ತು ತಂತ್ರಜ್ಞರಿಗೆ ಮಾಸಾಶನ ದೊರೆಯುತ್ತಿದೆ. ಕರ್ನಾಟಕದಲ್ಲೂ ದೊರೆಯುವಂತಾಗಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಹೇಳಿದ್ದಾರೆ.