Don't Miss!
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'50 ವರ್ಷಗಳ ದುಡಿಮೆಗೆ ಸಾರ್ಥಕತೆ ದೊರಕಿದೆ': ರಾಜ್ಯೋತ್ಸವ ಪ್ರಶಸ್ತಿ ಕುರಿತು ಎ.ಟಿ ರಘು ಸಂತಸ
ಮಡಿಕೇರಿ: ಚಲನಚಿತ್ರ ಕ್ಷೇತ್ರದಲ್ಲಿನ ಸಾಧನೆಯನ್ನು ಗುರುತಿಸಿ ನನಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿರುವುದು 50 ವರ್ಷದ ವೃತ್ತಿಜೀವನದ ದೊಡ್ಡ ಆಸ್ತಿಯೆಂದು ನಿರ್ದೇಶಕ ಎ.ಟಿ. ರಘು ತಿಳಿಸಿದ್ದಾರೆ.
2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ರಾಜ್ಯ ಸರ್ಕಾರ ಬುಧವಾರ ಪ್ರಕಟ ಮಾಡಿದ್ದು, 65 ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 65 ಸಾಧಕರನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಚಿತ್ರರಂಗದಕ್ಕೆ ಸೇರಿದ ಹಿರಿಯ ನಿರ್ದೇಶಕ ಆಪಾಡಾಂಡ ತಿಮ್ಮಯ್ಯ ರಘು (ಎ.ಟಿ ರಘು) ರಾಜ್ಯೋತ್ಸವ ಪುರಸ್ಕಾರಕ್ಕೆ ಬಾಜನರಾಗಿದ್ದಾರೆ.
ಹಿರಿಯ ನಿರ್ದೇಶಕ ಎಟಿ ರಘು-ಛಾಯಾಗ್ರಾಹಕ ಬಸವರಾಜ್ಗೆ ರಾಜ್ಯೋತ್ಸವ ಪ್ರಶಸ್ತಿ
ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಎ.ಟಿ. ರಘು, ಕೊಡಗು ಜಿಲ್ಲೆಯಿಂದ 1965 ರಲ್ಲಿ ಸಣ್ಣ ಪಾತ್ರದ ಮೂಲಕ ಸಿನಿಮಾ ಕ್ಷೇತ್ರಕ್ಕೆ ಬಂದು 40ಕ್ಕೂ ಅಧಿಕ ಸಿನಿಮಾಗಳನ್ನು ನಿರ್ದೇಶಿಸಿದ್ದೇನೆ. ಇವುಗಳಲ್ಲಿ 25ಕ್ಕೂ ಅಧಿಕ ಸಿನಿಮಾಗಳು ಅಂಬರೀಶ್ ಅವರದ್ದು ಎಂಬುವುದು ವಿಶೇಷ. 50 ವರ್ಷಗಳ ಕಾಲ ದುಡಿಮೆಯೇ ಸಿನಿಮಾವೆಂದು ಭಾವಿಸಿದ್ದೆ. ಈಗ ಆ ದುಡಿಮೆಗೆ ಸಾರ್ಥಕತೆ ದೊರಕಿದ್ದು, ಇದೇ ದೊಡ್ಡ ಆಸ್ತಿಯೆಂದು ಭಾವಿಸುತ್ತೇನೆ ಎಂದರು.
ಸದ್ಯ ಕೊಂಚ ಅನಾರೋಗ್ಯದಿಂದ ಬಳಲುತ್ತಿದ್ದೇನೆ. ಕಣ್ಣುಗಳ ಶಸ್ತ್ರಚಿಕಿತ್ಸೆ ಆಗಿದೆ. ಡಯಾಲಿಸಿಸ್ನಲ್ಲಿದ್ದು, ಆಸ್ಪತ್ರೆಯಿಂದಲೇ ಮಾತನಾಡುತ್ತಿದ್ದೇನೆ. 70ರ ದಶಕದಲ್ಲಿ ದೇವರ ಕಣ್ಣು ಎಂಬ ಚಿತ್ರಕ್ಕೆ ಅಸಿಸ್ಟಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದೆ. ಆ ಬಳಿಕ ಅಂಬರೀಶ್ ಅವರೇ ನನ್ನ ದೇವರ ಕಣ್ಣಾಗಿ ಬಾಳಿಗೆ ಬೆಳಕಾದರು. ಕೊಡಗಿನಿಂದ ಬಂದು ಎ.ಟಿ. ರಘು ಆಗಿ ಗುರುತಿಸಿಕೊಳ್ಳಲು ಅಂಬರೀಶ್ ಅವರೇ ಮುಖ್ಯ ಕಾರಣ ಎಂದು ನೆನಪಿಸಿಕೊಂಡರು.
ಎ.ಟಿ ರಘು ಅವರ ಚಿತ್ರಗಳು:
Recommended Video
ಕನ್ನಡ, ಹಿಂದಿ, ಮಲಯಾಳಂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಎ.ಟಿ.ರಘು 1990ರಲ್ಲಿ 'ಅಜಯ್-ವಿಜಯ್' ಚಿತ್ರದ ಮೂಲಕ ಕನ್ನಡ ಇಂಡಸ್ಟ್ರಿ ಪ್ರವೇಶ ಮಾಡಿದ್ದರು. 'ಇನ್ಸ್ ಪೆಕ್ಟರ್ ಕ್ರಾಂತಿ ಕುಮಾರ್', 'ಪುಟ್ಟ ಹೆಂಡ್ತಿ', 'ಮೈಸೂರು ಜಾಣ', 'ಮಂಡ್ಯದ ಗಂಡು', ಮಿಡಿದ ಹೃದಯಗಳು', 'ಅಂತಿಮ ತೀರ್ಪು', 'ನ್ಯಾಯಕ್ಕಾಗಿ ನಾನು', 'ಪದ್ಮವ್ಯೂಹ', 'ಸೂರ್ಯೋದಯ' ಸೇರಿದಂತೆ ಹಲವು ಚಿತ್ರಗಳನ್ನ ನಿರ್ದೇಶನ ಮಾಡಿದ್ದರು.