Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಮ್ಯಾಕ್ಸ್ ಸೆಟ್ಗೆ ಭೇಟಿ ನೀಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ಸತೀಶ್ ನೀನಾಸಂ ಮತ್ತು ನೀರ್ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ.
ಮೈಸೂರಿನಲ್ಲಿ ಎರಡನೇ ಹಾಗೂ ಕೊನೆಯ ಹಂತದ ಚಿತ್ತೀಕರಣ ಸಾಗುತ್ತಿದ್ದು, ಸೆಟ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಭೇಟಿ ನೀಡಿದ್ದಾರೆ.
2ನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ 'ರಾಜವೀರ ಮದಕರಿ ನಾಯಕ'; ಲೊಕೇಶನ್ ಹುಡುಕಾಟದಲ್ಲಿ ಚಿತ್ರತಂಡ
ಈ ವೇಳೆ ನಿರ್ದೇಶಕ ವಿಜಯ್ ಪ್ರಸಾದ್, ನಟ ಸತೀಶ್ ನೀನಾಸಂ, ನಟಿ ಕಾರುಣ್ಯ ರಾಮ್ ಸೇರಿದಂತೆ ಇನ್ನಿತರ ಕೆಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು.
ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸುತ್ತಿದ್ದು, ಈಗಾಗಲೇ ಮೈಸೂರಿನಲ್ಲಿ ಮೊದಲ ಶೆಡ್ಯೂಲ್ ಮುಗಿಸಿದ್ದರು. ಈಗ ಎರಡನೇ ಶೆಡ್ಯೂಲ್ ಡಿಸೆಂಬರ್ 14ರಿಂದ ಆರಂಭಿಸಿದ್ದರು.
'ಪೆಟ್ರೋಮ್ಯಾಕ್ಸ್' ಕೊನೆಯ ಹಂತದ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ
ಮತ್ತೊಂದೆಡೆ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರು ದರ್ಶನ್ ಜೊತೆ ರಾಜವೀರ ಮದಕರಿ ನಾಯಕ ಸಿನಿಮಾ ಮಾಡ್ತಿದ್ದಾರೆ. ಕೇರಳದಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಈಗ ಎರಡನೇ ಹಂತಕ್ಕೆ ಲೋಕೆಶನ್ ಹುಡುಕಿದ್ದಾರೆ.
ಕುಮಟಾದ ಮಿರ್ಜಾನ್ ಕೋಟೆಯಲ್ಲಿ ಮದಕರಿ ನಾಯಕ ಶೂಟಿಂಗ್ ಮಾಡಲು ನಿರ್ಧರಿಸಲಾಗಿದೆ. ಆದ್ರೆ, ಯಾವಾಗ ಎಂಬ ಮಾಹಿತಿ ಸದ್ಯಕ್ಕಿಲ್ಲ. ಇನ್ನುಳಿದಂತೆ ಹಿರಿಯ ನಟ ದೊಡ್ಡಣ್ಣ, ಸುಮಲತಾ ಅಂಬರೀಶ್ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
Recommended Video
ರಾಕ್ಲೈನ್ ವೆಂಕಟೇಶ್ ರಾಜವೀರ ಮದಕರಿ ನಾಯಕ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಇದೀಗ, ಪೆಟ್ರೋಮ್ಯಾಕ್ಸ್ ಚಿತ್ರದ ಸೆಟ್ಗೆ ಹಿರಿಯ ಹಾಗೂ ಲೆಜೆಂಡ್ ನಿರ್ದೇಶಕ ಭೇಟಿ ನೀಡಿದ್ದರಂತೆ ಚಿತ್ರತಂಡ ಸಂತಸಗೊಂಡಿದೆ.