Don't Miss!
- News ಬೆಂಗಳೂರು ನಮ್ಮ ಮೆಟ್ರೋ ಬೆಳಗ್ಗೆ 03:35ಕ್ಕೆ ಆರಂಭ: ಏಕೆ? ಕಾರಣ ಇಲ್ಲಿದೆ
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಮ್ಯಾಕ್ಸ್ ಸೆಟ್ಗೆ ಭೇಟಿ ನೀಡಿದ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು
ಸತೀಶ್ ನೀನಾಸಂ ಮತ್ತು ನೀರ್ದೋಸೆ ಖ್ಯಾತಿಯ ವಿಜಯ್ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಎರಡನೇ ಹಂತದ ಶೂಟಿಂಗ್ ನಡೆಯುತ್ತಿದೆ.
ಮೈಸೂರಿನಲ್ಲಿ ಎರಡನೇ ಹಾಗೂ ಕೊನೆಯ ಹಂತದ ಚಿತ್ತೀಕರಣ ಸಾಗುತ್ತಿದ್ದು, ಸೆಟ್ಗೆ ಕನ್ನಡದ ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಭೇಟಿ ನೀಡಿದ್ದಾರೆ.
2ನೇ ಹಂತದ ಚಿತ್ರೀಕರಣಕ್ಕೆ ಸಜ್ಜಾದ 'ರಾಜವೀರ ಮದಕರಿ ನಾಯಕ'; ಲೊಕೇಶನ್ ಹುಡುಕಾಟದಲ್ಲಿ ಚಿತ್ರತಂಡ
ಈ ವೇಳೆ ನಿರ್ದೇಶಕ ವಿಜಯ್ ಪ್ರಸಾದ್, ನಟ ಸತೀಶ್ ನೀನಾಸಂ, ನಟಿ ಕಾರುಣ್ಯ ರಾಮ್ ಸೇರಿದಂತೆ ಇನ್ನಿತರ ಕೆಲವು ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು.
ಸತೀಶ್ ನೀನಾಸಂ ಜೊತೆ ಹರಿಪ್ರಿಯಾ ನಾಯಕಿಯಾಗಿ ನಟಿಸುತ್ತಿದ್ದು, ಈಗಾಗಲೇ ಮೈಸೂರಿನಲ್ಲಿ ಮೊದಲ ಶೆಡ್ಯೂಲ್ ಮುಗಿಸಿದ್ದರು. ಈಗ ಎರಡನೇ ಶೆಡ್ಯೂಲ್ ಡಿಸೆಂಬರ್ 14ರಿಂದ ಆರಂಭಿಸಿದ್ದರು.
'ಪೆಟ್ರೋಮ್ಯಾಕ್ಸ್' ಕೊನೆಯ ಹಂತದ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ
ಮತ್ತೊಂದೆಡೆ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರು ದರ್ಶನ್ ಜೊತೆ ರಾಜವೀರ ಮದಕರಿ ನಾಯಕ ಸಿನಿಮಾ ಮಾಡ್ತಿದ್ದಾರೆ. ಕೇರಳದಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿದ್ದ ಚಿತ್ರತಂಡ ಈಗ ಎರಡನೇ ಹಂತಕ್ಕೆ ಲೋಕೆಶನ್ ಹುಡುಕಿದ್ದಾರೆ.
ಕುಮಟಾದ ಮಿರ್ಜಾನ್ ಕೋಟೆಯಲ್ಲಿ ಮದಕರಿ ನಾಯಕ ಶೂಟಿಂಗ್ ಮಾಡಲು ನಿರ್ಧರಿಸಲಾಗಿದೆ. ಆದ್ರೆ, ಯಾವಾಗ ಎಂಬ ಮಾಹಿತಿ ಸದ್ಯಕ್ಕಿಲ್ಲ. ಇನ್ನುಳಿದಂತೆ ಹಿರಿಯ ನಟ ದೊಡ್ಡಣ್ಣ, ಸುಮಲತಾ ಅಂಬರೀಶ್ ಸಹ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.
Recommended Video
ರಾಕ್ಲೈನ್ ವೆಂಕಟೇಶ್ ರಾಜವೀರ ಮದಕರಿ ನಾಯಕ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ಇದೀಗ, ಪೆಟ್ರೋಮ್ಯಾಕ್ಸ್ ಚಿತ್ರದ ಸೆಟ್ಗೆ ಹಿರಿಯ ಹಾಗೂ ಲೆಜೆಂಡ್ ನಿರ್ದೇಶಕ ಭೇಟಿ ನೀಡಿದ್ದರಂತೆ ಚಿತ್ರತಂಡ ಸಂತಸಗೊಂಡಿದೆ.