Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿರಿಯ ನಿರ್ಮಾಣ ನಿರ್ವಾಹಕ ರಮೇಶ್ ಬಾಬು ನಿಧನ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಣ ನಿರ್ವಾಹಕ ಎ ವಿ ರಮೇಶ್ ಬಾಬು ಅವರು ಮಂಗಳವಾರ (24ನೇ ಡಿಸೆಂಬರ್ 2013) ಹೃದಯಾಘಾತದಿಂದ ಅಸುನೀಗಿದ್ದಾರೆ. ಜೆ ಪಿ ನಗರದ ನಿವಾಸದಲ್ಲಿ ಬಾಬು ಅವರ ಪಾರ್ಥೀವ ಶರೀರವನ್ನು ಇಡಲಾಗಿದ್ದು ಚಿತ್ರರಂಗದ ಕೆಲವರು ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿರುವ ರಮೇಶ್ ಬಾಬು ಅವರು ಆಗಿನ ಕಾಲದಲ್ಲೇ ಮದ್ರಾಸ್ ನಿರ್ಮಾಣ ನಿರ್ವಾಹಕರ ಸಂಘದ ಸದಸ್ಯರಾಗಿದ್ದರು. ಕರ್ನಾಟಕ ಚಲನಚಿತ್ರ ನಿರ್ಮಾಣ ನಿರ್ವಾಹಕರ ಸಂಘದ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ. ಅವರಿಗೆ ಎರಡು ವರ್ಷದ ಹಿಂದೆ ತೆರೆದ ಹೃದಯ ಚಿಕಿತ್ಸೆ ಸಹ ಮಾಡಲಾಗಿತ್ತು.
ಕನ್ನಡ ಸಿನಿಮಾ ರಂಗದಲ್ಲಿ ಇವರ ಜಾಣ್ಮೆ ಕೆಲಸದಲ್ಲಿ ಕೌಶಲ್ಯ ಹಾಗೂ ಸದ್ಭಾವನೆ ಅವರಿಗೆ ಕಳಶಪ್ರಾಯವಾಗಿತ್ತು. ರಮೇಶ್ ಬಾಬು ಅವರ ನಿಧನಕ್ಕೆ ಕರ್ನಾಟಕ ಚಲನ ಚಿತ್ರ ನಿರ್ಮಾಣ ನಿರ್ವಾಹಕರ ಸಂಘ ಅವರ ಸೇವೆಯನ್ನು ಶ್ಲಾಘಿಸಿದೆ. ಕನ್ನಡ ಸಿನಿಮಾ ಪ್ರಚಾರಕರ್ತರ ಸಂಘದ ಅಧ್ಯಕ್ಷ ನಾಗೇಂದ್ರ, ಆರ್ ವಿಜಯಕುಮಾರ್, ರಾಘವೇಂದ್ರ ಚಿತ್ರವಾಣಿಯ ಸುಧೀಂದ್ರ ವೆಂಕಟೇಶ್, ಕಲ್ಲೇಶ್, ಆರ್ ಎಸ್ ಹರೀಶ್ ಅವರು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. (ಒನ್ಇಂಡಿಯಾ ಕನ್ನಡ)