Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಿನ್ನರಿ' ಧಾರಾವಾಹಿ ನಟ ಕಿರಣ್ ರಾಜ್ ಬಂಧನ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಕಿನ್ನರಿ' ಧಾರಾವಾಹಿಯಲ್ಲಿ ನಟಿಸುತ್ತಿರುವ ಪ್ರಮುಖ ಪಾತ್ರಧಾರಿ ಕಿರಣ್ ರಾಜ್ ರನ್ನ ಬೆಂಗಳೂರಿನ ರಾಜರಾಜೇಶ್ವರಿ ನಗರದ ಪೊಲೀಸರು ಬಂಧಿಸಿದ್ದಾರೆ.
ಕಿರುತೆರೆ ನಟ ಕಿರಣ್ ರಾಜ್ ವಿರುದ್ಧ ಮಾಡೆಲ್ ಕಮ್ ನಟಿ ಯಾಸ್ಮಿನ್ ಪಠಾಣ್ ದೂರು ನೀಡಿದ್ದರು. ಹಾಗ್ನೋಡಿದ್ರೆ, ಕಿರಣ್ ರಾಜ್ ಹಾಗೂ ಯಾಸ್ಮಿನ್ ಪಠಾಣ್ ಐದು ವರ್ಷಗಳಿಂದ ಲಿವಿಂಗ್ ಟು ಗೆದರ್ ರಿಲೇಶನ್ ಶಿಪ್ ನಲ್ಲಿದ್ದಾರೆ. ಕಳೆದ ವಾರ ಇವರಿಬ್ಬರ ನಡುವೆ ಜಗಳ ಆಗಿದೆ. ಆಗ ಕಿರಣ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯಾಸ್ಮಿನ್ ಪಠಾಣ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದರು. ದೂರಿನ ಅನ್ವಯ ಕಿರಣ್ ರಾಜ್ ವಿರುದ್ಧ ಎಫ್.ಐ.ಆರ್ ದಾಖಲು ಮಾಡಲಾಗಿತ್ತು.
ನಟ ಕಿರಣ್ ರಾಜ್ ಹಾಗೂ ಯಾಸ್ಮಿನ್ ನೀಡಿದ ದೂರಿನಲ್ಲಿ ಏನಿದೆ?
ಇತ್ತ ತಮ್ಮ ತಂದೆ ಹಾಗೂ ತಾಯಿ ಮೇಲೆ ಹಲ್ಲೆ ಮಾಡಿದ್ದಾಳೆ ಎಂದು ಆರೋಪಿಸಿ ಯಾಸ್ಮಿನ್ ವಿರುದ್ಧ ಕಿರಣ್ ರಾಜ್ ಕೂಡ ದೂರು ನೀಡಿದ್ದರು. ಸದ್ಯ ಪ್ರಕರಣದ ತನಿಖೆ ಕೈಗೊಂಡಿರುವ ರಾಜರಾಜೇಶ್ವರಿ ನಗರದ ಪೊಲೀಸರು ನಟ ಕಿರಣ್ ರಾಜ್ ರನ್ನ ಬಂಧಿಸಿದ್ದಾರೆ.