ಪರೋಕ್ಷವಾಗಿ ಅಶ್ವಥ್ ಕುಟುಂಬಕ್ಕೆ ನೆರವಾದರಾ ಡಿ ಬಾಸ್ ?
Recommended Video

ಕನ್ನಡ ಸಿನಿಮರಂಗದಲ್ಲಿ ಚಾಮಯ್ಯ ಮೇಷ್ಟ್ರು ಅಂತಾನೇ ಪ್ರಖ್ಯಾತಿ ಗಳಿಸಿದ್ದ ಹಿರಿಯ ನಟ ಅಶ್ವಥ್ ಅವರ ಪುತ್ರ ಶಂಕರ್ ಅಶ್ವಥ್ ಕ್ಯಾಬ್ ಡ್ರೈವರ್ ಆಗಿದ್ದಾರೆ ಎನ್ನುವ ವಿಚಾರ ಎಲ್ಲೆಡೆ ಸುದ್ದಿ ಆಗಿತ್ತು. ಸಾಕಷ್ಟು ದಿನಗಳು ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ಶಂಕರ್ ಅವರು ಅವಕಾಶವಿಲ್ಲದೆ ಜೀವನಕ್ಕಾಗಿ ಡ್ರೈವರ್ ಕೆಲಸವನ್ನ ಆಯ್ಕೆ ಮಾಡಿಕೊಂಡಿದ್ದರು.
ಸಿನಿಮಾರಂಗದಲ್ಲಿ ಸಾಕಷ್ಟು ಪ್ರಖ್ಯಾತಿ ಪಡೆದಿದ್ದ ಹಿರಿಯ ನಟನ ಮಗ ಹಾಗೂ ಅದ್ಬುತ ಕಲಾವಿದರಾಗಿದ್ದ ಶಂಕರ್ ಅವರಿಗೆ ಅವಕಾಶಗಳ ಕೊರೆತೆ ಇದೆ ಎನ್ನುವುದನ್ನ ತಿಳಿದು ಸಾಕಷ್ಟು ಕಲಾವಿದರು ಬೇಸರ ವ್ಯಕ್ತ ಪಡಿಸಿದ್ದರು.
ಇನ್ನೂ ಅನೇಕ ಹಿರಿಯ ಕಲಾವಿದರು ಈಗಿನ ನಿರ್ದೇಶಕರುಗಳಿಗೆ ನಮ್ಮ ಅವಶ್ಯಕತೆ ಇಲ್ಲ ಆದ್ದರಿಂದ ನಾವು ಬೇರೆಯದ್ದೇ ಕೆಲಸಗಳನ್ನ ಹುಡಿಕಿಕೊಳ್ಳಬೇಕಾಗಿದೆ ಎನ್ನುವ ಮಾತುಗಳನ್ನ ಹೇಳಿದ್ದರು. ಇದನ್ನ ಅರಿತ ಡಿ ಬಾಸ್ ಪರೋಕ್ಷವಾಗಿ ಅಶ್ವಥ್ ಅವರ ಕುಟುಂಬಕ್ಕೆ ನೆರವಾಗಿದ್ದಾರೆ. ಅದು ಹೇಗೆ ಅಂತೀರಾ ಮುಂದೆ ಓದಿ.

ಶಂಕರ್ ಅಶ್ವಥ್ ಅವರಿಗೆ ನೆರವಾದ್ರ ಡಿ ಬಾಸ್
ನಟ ಶಂಕರ್ ಅಶ್ವಥ್ ಅವರ ಕುಟುಂಬಕ್ಕೆ ಪರೋಕ್ಷವಾಗಿ ದರ್ಶನ್ ನೆರವಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಚಿತ್ರರಂಗಕ್ಕೆ ಬಂದು ಸಾಕಷ್ಟು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಶಂಕರ್ ಅಶ್ವಥ್ ದರ್ಶನ್ ಅವರ ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ.

ದರ್ಶನ್ ಚಿತ್ರದಲ್ಲಿ ಅಭಿನಯ
ಅವಕಾಶಗಳ ಕೊರತೆಯಿಂದಾಗಿ ಟ್ಯಾಕ್ಸಿ ಡ್ರೈವರ್ ಆಗಿದ್ದ ಶಂಕರ್ ಅಶ್ವಥ್ ಅವರಿಗೆ ದರ್ಶನ್ ಅಭಿನಯಿಸುತ್ತಿರುವ ಯಜಮಾನ ಚಿತ್ರದಲ್ಲಿ ಆಕ್ಟ್ ಮಾಡಲು ಅವಕಾಶ ಸಿಕ್ಕಿದೆ. ಈ ವಿಚಾರವನ್ನ ಶಂಕರ್ ಅವರೇ ಫೇಸ್ ಬುಕ್ ಮೂಲಕ ತಿಳಿಸಿದ್ದಾರೆ.

ಅವಕಾಶ ನೀಡಿದ ಚಾಲೆಂಜಿಂಗ್ ಸ್ಟಾರ್
ಸಿನಿಮಾರಂಗದಿಂದ ದೂರ ಸರಿದಿದ್ದ ಶಂಕರ್ ಅಶ್ವಥ್ ಅವರಿಗೆ ಸಿನಿಮಾದಲ್ಲಿ ನಟಿಸಲು ಅವಕಾಶ ನೀಡುವಂತೆ ಚಿತ್ರತಂಡಕ್ಕೆ ದರ್ಶನ್ ತಿಳಿಸಿದ್ದಾರೆ ಎನ್ನುವ ಮಾತು ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ಹಾಗೆ ಆಗಿದ್ದಲ್ಲಿ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ.

ಊಬರ್ ಭಾಗ್ಯದಿಂದ ಅನೇಕರ ಭೇಟಿ
ಜೀವನ ಸಾಗಿಸಲು ಟ್ಯಾಕ್ಸಿ ಡ್ರೈವರ್ ಆಗಿರುವ ಶಂಕರ್ ಅಶ್ವಥ್ ಅವರಿಗೆ ನಿಧಾನವಾಗಿ ಅವಕಾಶಗಳು ಹುಡುಕಿಕೊಂಡು ಬರುತ್ತಿವೆಯಂತೆ. ಅಷ್ಟೇ ಅಲ್ಲದೆ ಕಾರಿನಲ್ಲಿ ನೋಡಿ ಗುರುತಿಸುತ್ತಿರುವವರು ಮನೆಗೆ, ಸಮಾರಂಭಗಳಿಗೆ ಕರೆದುಕೊಂಡು ಹೋಗಿ ಸತ್ಕಾರ ಮಾಡುತ್ತಿದ್ದಾರಂತೆ.


Click it and Unblock the Notifications











