Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
13 ವರ್ಷದ ಹಳೆಯ ಫೋಟೋ ಹಿಂದಿನ ಕಥೆ ಹೇಳಿದ ಶಂಕರ್ ಅಶ್ವಥ್
ನಟ ಶಂಕರ್ ಅಶ್ವಥ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಚಿತ್ರರಂಗದ ಹಳೆಯ ಅನೇಕ ನೆನೆಪುಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. 'ಯಜಮಾನ' ಸಿನಿಮಾದ ನಂತರ ಅವರು 'ಪೊಗರು' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿ ಇದ್ದಾರೆ.
ಇದೀಗ ನಟ ಅರ್ಜುನ್ ಸರ್ಜಾ ಅವರ ಗುಣದ ಬಗ್ಗೆ ಶಂಕರ್ ಅಶ್ವತ್ ಬರೆದುಕೊಂಡಿದ್ದಾರೆ. 'ಪೊಗರು' ಸಿನಿಮಾದಲ್ಲಿ ಧ್ರುವ ಸರ್ಜಾ ಅವರ ಜೊತೆಗೆ ನಟಿಸುತ್ತಿರುವ ಶಂಕರ್ ಅಶ್ವಥ್, ಅರ್ಜುನ್ ಸರ್ಜಾ ಅವರ ಒಂದು ಫೋಟೋ ಹಿಂದಿನ ಘಟನೆಯನ್ನು ಹಂಚಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ನನ್ನ ಮಗಳಿದ್ದಂತೆ ಎಂದ ಶಂಕರ್ ಅಶ್ವಥ್
ಹದಿಮೂರು ವರ್ಷಗಳ ಹಿಂದೆ ತಮ್ಮ ಮನೆಗೆ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಬಂದಿದ್ದರಂತೆ. ಈ ವೇಳೆ ಎಲ್ಲರೂ ಸೇರಿ ಒಂದು ಫೋಟೋ ತೆಗೆಸಿಕೊಂಡಿದ್ದರು. ಆ ಫೋಟೋ ಈಗ ಮತ್ತೆ ಶಂಕರ್ ಅಶ್ವಥ್ ಕೈ ಸೇರಿದೆ.
ಅಪರೂಪದ ಫೋಟೋ ನೋಡಿದ ಶಂಕರ್ ಅಶ್ವಥ್, ಸರ್ಜಾ ಕುಟುಂಬದ ಪ್ರೀತಿಯನ್ನು ಈ ರೀತಿಯಾಗಿ ನೆನೆದಿದ್ದಾರೆ. ಮುಂದೆ ಓದಿ...
ಇದು ನೈಜ ಸಂಗತಿ
''ಗ್ರೇಟ್ ಅರ್ಜುನ್ ಸರ್ಜಾ ಅವರ ಈ ಗುಣಕ್ಕೆ ಏನೆಂದು ನಾ ಹೇಳಲಿ. ಇದು ಸತ್ಯ ನಾನು ಹೈದರಾಬಾದ್ ನಲ್ಲಿ 'ಪೊಗರು' ಚಿತ್ರೀಕರಣಕ್ಕೆ ಹೋದ ಸಂದರ್ಭದಲ್ಲಿ ನಡೆದ ನೈಜ ಸಂಗತಿ ಇದರಲ್ಲಿ ಯಾವ ಉಪ್ಪು ಸೊಪ್ಪು ಬೆರತಿಲ್ಲ. ನಾಯಕ ನಟರಾದ ಧ್ರುವ ಸರ್ಜಾ "ನಾನು ಚಿಕ್ಕವನಿದ್ದಾಗ ನಿಮ್ಮ ಮನೆಗೆ ಮಾಮ ಅರ್ಜುನ್ ಸರ್ಜಾ ಜೊತೆಯಲ್ಲಿ ಬಂದಿದ್ದೆ" ಅಂದಾಗ ನನಗೆ ಜ್ಞಾಪಕ ಬರಲಿಲ್ಲ. - ಶಂಕರ್ ಅಶ್ವಥ್, ನಟ
ಫೋಟೋ ಕಳುಹಿಸಿದ ಅರ್ಜುನ್ ಸರ್ಜಾ
"ನಾಳೆ ನೀವು ಇರ್ತೀರಾ ಮಾಮನೂ ಇಲ್ಲಿ ಬೇರೆ ಚಿತ್ರೀಕರಣ ಕ್ಕೆ ಬಂದಿದ್ದಾರೆ ಅವರ ಹತ್ತಿರ ಆ ಫೋಟೋ ಇದೆ ತೋರಿಸ್ತೇನೆ ಎಂದು ಧ್ರುವ ಹೇಳಿದಾಗ, ಇಲ್ಲಾ ನಾನು ಬೇರೆ ಚಿತ್ರೀಕರಣಕ್ಕೆ ಕೋಲಾರಕ್ಕೆ ಹೋಗಬೇಕೆಂದೆ. ಆಗ ತಕ್ಷಣವೇ ಅರ್ಜುನ್ ಸರ್ಜಾಗೆ ಫೋನ್ ಮಾಡಿ ಅವರ ಮೊಬೈಲ್ ನಲ್ಲಿದ್ದ ಈ ಫೋಟೋ ತರಿಸಿಕೊಂಡು ನನಗೆ ಕಳುಹಿಸಿದರು. - ಶಂಕರ್ ಅಶ್ವಥ್, ನಟ
ಒಂದೇ ಸಾಲಿನಲ್ಲಿ ದರ್ಶನ್ ಗುಣ ಹೇಳಿಬಿಟ್ಟರು ಶಂಕರ್ ಅಶ್ವತ್
ಎಂತಹ ದೊಡ್ಡ ಮನುಷ್ಯ!
''ಇಲ್ಲಿ ಗಮನಿಸಬೇಕಾದ ವಿಷಯವೆಂದರೆ 2006 ನೇ ಇಸವಿಯಲ್ಲಿ ನಮ್ಮ ತಂದೆಯನ್ನು ನೋಡಲು ಬಂದಾಗ ತೆಗೆದ ಈ ಫೋಟೋ ಹದಿಮೂರು ವರ್ಷಗಳ ನಂತರವೂ ಅರ್ಜುನ್ ಸರ್ಜಾರ ಮೊಬೈಲ್ ನಲ್ಲಿದೆ ಎಂದರೆ ಆತ ನನ್ನ ತಂದೆಗೆ ಎಷ್ಟು ಗೌರವ ಕೊಡುತ್ತಾರೆ, ಎಂತಹ ದೊಡ್ಡ ಮನುಷ್ಯ!!'' - ಶಂಕರ್ ಅಶ್ವಥ್, ನಟ
'ಯಜಮಾನ' ನಂತರ 'ಪೊಗರು'
ಅವಕಾಶಗಳು ಇಲ್ಲ ಎಂದು ದುಃಖದಲ್ಲಿ ಇದ್ದ ಶಂಕರ್ ಅಶ್ವಥ್ ರಿಗೆ ಈಗ ಒಂದರ ನಂತರ ಒಂದು ಅವಕಾಶಗಳು ಸಿಗುತ್ತಿವೆ. 'ಯಜಮಾನ' ಸಿನಿಮಾದಲ್ಲಿ ದರ್ಶನ್ ಜೊತೆಗೆ ನಟಿಸಿದ್ದ ಇವರು ಈಗ ಧ್ರುವ ಸರ್ಜಾ ಜೊತೆಗೆ 'ಪೊಗರು' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದರ ನಂತರ ಮತ್ತೊಂದು ಹೊಸ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.