Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರುಣ್ ಸುಧೀರ್ ಹುಟ್ಟುಹಬ್ಬದಂದು ಹೊಸ ಸಿನಿಮಾ ಘೋಷಿಸಿದ ಶರಣ್
'ಅವತಾರ್ ಪುರುಷ' ಎಂಬ ಸಿನಿಮಾ ಮಾಡುತ್ತಿರುವ ನಟ ಶರಣ್ ಇತ್ತೀಚಿಗಷ್ಟೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಸುದ್ದಿಯಾಗಿದ್ದರು. ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಶರಣ್ ವಿಡಿಯೋವೊಂದು ಹಂಚಿಕೊಂಡು ಕುತೂಹಲ ಹುಟ್ಟುಹಾಕಿದ್ದರು.
ಯಾರೇ ಏನೇ ಕೇಳಿದರು, ಯಾರ ಬಳಿಯೂ ಮಾತನಾಡಿದರು ವಿಸಿಲ್ ಮೂಲಕವೇ ಸಂವಹನ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಶರಣ್ ಏಕೆ ಹೀಗೆ ಮಾಡ್ತಿದ್ದಾರೆ ಎಂದು ತಿಳಿಯಬೇಕಾದರೆ ಅಕ್ಟೋಬರ್ 9ಕ್ಕೆ ಕಾಯಿರಿ ಎಂಬ ಪ್ರೋಮೋ ನಿರೀಕ್ಷೆ ಹೆಚ್ಚಿಸಿತ್ತು.
ಶರಣ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ
ಇದೀಗ, ಶರಣ್ ಅವರ ವಿಸಿಲ್ ಹಿಂದಿನ ಸೀಕ್ರೆಟ್ ಬಯಲಾಗಿದೆ. ಹೌದು, ನಟ ಶರಣ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಪ್ರೊಡಕ್ಷನ್ ನಂ 3 ಹೆಸರಿನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಶರಣ್, ತರುಣ್ ಸುಧೀರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.
ಚಿತ್ರದ ಹೆಸರು ಏನು ಎಂಬುದು ಕುತೂಹಲ ಮೂಡಿಸಿದ್ದು, ಪೋಸ್ಟರ್ ಮೇಲೆ ವಿಸಿಲ್ ಇದೆ. ಇನ್ನು ಈ ಚಿತ್ರವನ್ನು ಜಗದೀಶ್ ಹಂಪಿ ನಿರ್ದೇಶನ ಮಾಡಲಿದ್ದು, ಶರಣ್ ಬಂಡವಾಳ ಹಾಕಲಿದ್ದಾರೆ. ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
Recommended Video
ಇನ್ನುಳಿದಂತೆ ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮುಂದಿನ ದಿನಗಳಲ್ಲಿ ಕಲಾವಿದರು, ಶೂಟಿಂಗ್ ಬಗ್ಗೆ ತಿಳಿಯಬೇಕಿದೆ.