Don't Miss!
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತರುಣ್ ಸುಧೀರ್ ಹುಟ್ಟುಹಬ್ಬದಂದು ಹೊಸ ಸಿನಿಮಾ ಘೋಷಿಸಿದ ಶರಣ್
'ಅವತಾರ್ ಪುರುಷ' ಎಂಬ ಸಿನಿಮಾ ಮಾಡುತ್ತಿರುವ ನಟ ಶರಣ್ ಇತ್ತೀಚಿಗಷ್ಟೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ ಸುದ್ದಿಯಾಗಿದ್ದರು. ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಶರಣ್ ವಿಡಿಯೋವೊಂದು ಹಂಚಿಕೊಂಡು ಕುತೂಹಲ ಹುಟ್ಟುಹಾಕಿದ್ದರು.
ಯಾರೇ ಏನೇ ಕೇಳಿದರು, ಯಾರ ಬಳಿಯೂ ಮಾತನಾಡಿದರು ವಿಸಿಲ್ ಮೂಲಕವೇ ಸಂವಹನ ಮಾಡುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ಶರಣ್ ಏಕೆ ಹೀಗೆ ಮಾಡ್ತಿದ್ದಾರೆ ಎಂದು ತಿಳಿಯಬೇಕಾದರೆ ಅಕ್ಟೋಬರ್ 9ಕ್ಕೆ ಕಾಯಿರಿ ಎಂಬ ಪ್ರೋಮೋ ನಿರೀಕ್ಷೆ ಹೆಚ್ಚಿಸಿತ್ತು.
ಶರಣ್ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ
ಇದೀಗ, ಶರಣ್ ಅವರ ವಿಸಿಲ್ ಹಿಂದಿನ ಸೀಕ್ರೆಟ್ ಬಯಲಾಗಿದೆ. ಹೌದು, ನಟ ಶರಣ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಪ್ರೊಡಕ್ಷನ್ ನಂ 3 ಹೆಸರಿನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿರುವ ಶರಣ್, ತರುಣ್ ಸುಧೀರ್ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ.
ಚಿತ್ರದ ಹೆಸರು ಏನು ಎಂಬುದು ಕುತೂಹಲ ಮೂಡಿಸಿದ್ದು, ಪೋಸ್ಟರ್ ಮೇಲೆ ವಿಸಿಲ್ ಇದೆ. ಇನ್ನು ಈ ಚಿತ್ರವನ್ನು ಜಗದೀಶ್ ಹಂಪಿ ನಿರ್ದೇಶನ ಮಾಡಲಿದ್ದು, ಶರಣ್ ಬಂಡವಾಳ ಹಾಕಲಿದ್ದಾರೆ. ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
Recommended Video
ಇನ್ನುಳಿದಂತೆ ಈ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮುಂದಿನ ದಿನಗಳಲ್ಲಿ ಕಲಾವಿದರು, ಶೂಟಿಂಗ್ ಬಗ್ಗೆ ತಿಳಿಯಬೇಕಿದೆ.