Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಅಧ್ಯಕ್ಷ - ಉಪಾಧ್ಯಕ್ಷರ ಸಮಾಗಮ:ಹಾರಾರ್ - ಕಾಮಿಡಿ 'ಛೂ ಮಂತರ್' ರಿಲೀಸ್ಗೆ ರೆಡಿ!
ಸ್ಯಾಂಡಲ್ವುಡ್ನ ಅಧ್ಯಕ್ಷ ಶರಣ್. ಉಪಾಧ್ಯಕ್ಷ ಚಿಕ್ಕಣ್ಣ. ಇಬ್ಬರು ಹಾಸ್ಯ ದಿಗ್ಗಜರು ಒಟ್ಟಿಗೆ ಸೇರದೆ ಅದೆಷ್ಟೋ ದಿನಗಳಾಗಿತ್ತು. ಆದ್ರೀಗ ಮತ್ತೀಗ ಅದೇ ಜೋಡಿ ತೆರೆಮೇಲೆ ಕಾಣಿಸಿಕೊಳ್ಳಲಿದೆ. ಅದುವೇ 'ಛೂ ಮಂತರ್'.
'ಛೂ ಮಂತರ್' ಸಿನಿಮಾದಲ್ಲಿ ಸ್ಯಾಂಡಲ್ವುಡ್ ಅಧ್ಯಕ್ಷ ಶರಣ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇವರೊಂದಿಗೆ ಚಿಕ್ಕಣ್ಣ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೀಗಾಗಿ ಇಬ್ಬರು ದಿಗ್ಗಜರನ್ನು ಸಿಲ್ವರ್ ಸ್ಕ್ರೀನ್ ಮೇಲೆ ನೋಡುವುದಕ್ಕೆ ಸಿನಿಪ್ರಿಯರು ಕಾದು ಕೂತಿದ್ದಾರೆ.
"ದರ್ಶನ್ ಮೇಲೆ ಚಪ್ಪಲಿ ಎಸೆದ ಘಟನೆಗೆ ಡಿ ಬಾಸ್ ಅಭಿಮಾನಿಗಳೇ ಹೊಣೆ" ಅಹೋರಾತ್ರ!
ಶರಣ್ ಹಾಗೂ ಚಿಕ್ಕಣ್ಣ ಜೊತೆ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಅದಿತಿ ಪ್ರಭುದೇವ, ನಟಿ ಮೇಘನಾ ಗಾಂವ್ಕರ್ ಹಾಗೂ ಪ್ರಭು ಮುಂಡ್ಕರ್ 'ಛೂ ಮಂತರ್' ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಶರಣ್ ಹಾಗೂ ಚಿಕ್ಕಣ್ಣ ಕಾಂಬಿನೇಷನ್ನಲ್ಲಿ ಬರುತ್ತಿರುವ ಚಿತ್ರ ಎಂದ್ಮೇಲೆ ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ನೀಡುವುದಂತು ಖಚಿತ. ಅಂದ್ಹಾಗೆ 'ಕರ್ವ' ಸಿನಿಮಾದ ಮೂಲಕ ಕನ್ನಡಿಗರ ಮನಗೆದ್ದಿರುವ ನವನೀತ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ಈ ಸಿನಿಮಾವನ್ನು ನಿರ್ಮಿಸಿದ್ದು, ಇದು ಈ ಸಂಸ್ಥೆಯ ಐದನೇ ಚಿತ್ರ.
'ಛೂ ಮಂತರ್' ಟೈಟಲ್ ಹೇಳುವಂತೆ ಹಾರರ್ ಕಾಮಿಡಿ ಕಥಾಹಂದರ ಹೊಂದಿರೋ ಸಿನಿಮಾ. ಈ ಸಿನಿಮಾದ ಟಾಕಿ ಪೋಷನ್ ಈಗಾಗಲೇ ಮುಗಿದಿದೆ. ಬೆಂಗಳೂರು, ಮೈಸೂರು, ಉತ್ತರಕಾಂಡ ಹಾಗೂ ಲಂಡನ್ನಲ್ಲಿ ಶೂಟಿಂಗ್ ನಡೆದಿದ್ದು, ಶೀಘ್ರದಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.
ಅನೂಪ್ ಕಟ್ಟುಕರನ್ ಅನ್ನೋ ಛಾಯಾಗ್ರಾಹಕ ಇದೇ ಮೊದಲ ಬಾರಿಗೆ ಕ್ಯಾಮರಾಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ವೆಂಕಿ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಕೆಜಿಎಫ್ ಖ್ಯಾತಿಯ ಶಿವಕುಮಾರ್ ಹಾಗೂ ಮೋಹನ್ ಬಿ ಕೆರೆ ಆರ್ಟ್ ಡೈರೆಕ್ಷನ್ ಇದೆ.