Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೀತಾರಾಮ ಕಲ್ಯಾಣದಲ್ಲಿ ಬಿಗ್ ಸ್ಟಾರ್ ಗಳ ಸಮಾಗಮ
ನಿಖಿಲ್ ಕುಮಾರ್ ಅಭಿನಯದ ಸೀತಾ ರಾಮ ಕಲ್ಯಾಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ರಚಿತಾ ರಾಮ್ ಹಾಗೂ ನಿಖಿಲ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದು ಎ ಹರ್ಷ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಚುನಾವಣೆಯ ಸಂದರ್ಭ ಆಗಿರುವುದರಿಂದ ನಟ ನಿಖಿಲ್ ಕುಮಾರ್ ಅಪ್ಪನ ಪರವಾಗಿ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ.
ಆದರೆ ಇತ್ತ ಬಿಗ್ ಸ್ಟಾರ್ ಗಳು ಸೀತಾ ರಾಮ ಕಲ್ಯಾಣ ಚಿತ್ರದಲ್ಲಿ ಅಭಿನಯಿಸಲು ಬೆಂಗಳೂರಿಗೆ ಬಂದಿಳಿದಿದ್ದಾರೆ. ಬಿಡದಿ ಬಳಿ ಇರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಸೀತಾ ರಾಮ ಕಲ್ಯಾಣ ಚಿತ್ರದ ಶೂಟಿಂಗ್ ನಡೆಯುತ್ತಿದ್ದು ಶರತ್ ಕುಮಾರ್, ರವಿಶಂಕರ್ ಹಾಗೂ ಆದಿತ್ಯ ಮೆನನ್ ಶೂಟಿಂಗ್ ನಲ್ಲಿ ಭಾಗಿ ಆಗಿದ್ದಾರೆ.
ತಾಕತ್ತಿದ್ದರೆ ಕ್ಯಾಸೆಟ್ ಬಿಡುಗಡೆ ಮಾಡಲಿ: ಗುಡುಗಿದ ನಿಖಿಲ್ ಕುಮಾರಸ್ವಾಮಿ.!
ಶರತ್ ಕುಮಾರ್ ಅಭಿನಯದ ಐದನೇ ಕನ್ನಡ ಸಿನಿಮಾ ಇದಾಗಿದ್ದು ಜಾಗ್ವಾರ್ ಚಿತ್ರದ ನಂತರ ಆದಿತ್ಯ ಮೆನನ್ ಮತ್ತೆ ನಿಖಿಲ್ ಕುಮಾರ್ ಜೊತೆಯಲ್ಲಿ ಅಭಿನಯ ಮಾಡುತ್ತಿದ್ದಾರೆ. ಇನ್ನು ರವಿಶಂಕರ್ ಸೀತಾ ರಾಮ ಕಲ್ಯಾಣ ಸಿನಿಮಾದಲ್ಲಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಎ ಹರ್ಷ ಆದಷ್ಟು ಬೇಗ ಸಿನಿಮಾವನ್ನ ತೆರೆ ಮೇಲೆ ತರುವ ಪ್ರಯತ್ನ ಮಾಡಲಿದ್ದಾರೆ. ಇನ್ನು ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಆಗಿರುವ ನಿಝಿಲ್ ಬಿಡುವು ಮಾಡಿಕೊಂಡು ಚಿತ್ರೀಕರಣದ ಸ್ಥಳಕ್ಕೆ ಬಂದು ತಮ್ಮ ಸಿನಿಮಾದಲ್ಲಿ ಅಭಿನಯಿಸಲು ಬಂದ ಕಲಾವಿದರನ್ನ ಭೇಟಿ ಮಾಡಿದ್ದಾರೆ.
ರಾಜಮೌಳಿ ಮತ್ತು ನಿಖಿಲ್ ಬಗ್ಗೆ ಹೊರಬಿತ್ತು ರೋಚಕ ಸುದ್ದಿ.!