Don't Miss!
- News Mukhtar Ansari: ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೀತಾರಾಮ ಕಲ್ಯಾಣದಲ್ಲಿ ಬಿಗ್ ಸ್ಟಾರ್ ಗಳ ಸಮಾಗಮ
ನಿಖಿಲ್ ಕುಮಾರ್ ಅಭಿನಯದ ಸೀತಾ ರಾಮ ಕಲ್ಯಾಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ರಚಿತಾ ರಾಮ್ ಹಾಗೂ ನಿಖಿಲ್ ಇದೇ ಮೊದಲ ಬಾರಿಗೆ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದು ಎ ಹರ್ಷ ಸಿನಿಮಾವನ್ನ ನಿರ್ದೇಶನ ಮಾಡುತ್ತಿದ್ದಾರೆ. ಚುನಾವಣೆಯ ಸಂದರ್ಭ ಆಗಿರುವುದರಿಂದ ನಟ ನಿಖಿಲ್ ಕುಮಾರ್ ಅಪ್ಪನ ಪರವಾಗಿ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ.
ಆದರೆ ಇತ್ತ ಬಿಗ್ ಸ್ಟಾರ್ ಗಳು ಸೀತಾ ರಾಮ ಕಲ್ಯಾಣ ಚಿತ್ರದಲ್ಲಿ ಅಭಿನಯಿಸಲು ಬೆಂಗಳೂರಿಗೆ ಬಂದಿಳಿದಿದ್ದಾರೆ. ಬಿಡದಿ ಬಳಿ ಇರುವ ಈಗಲ್ ಟನ್ ರೆಸಾರ್ಟ್ ನಲ್ಲಿ ಸೀತಾ ರಾಮ ಕಲ್ಯಾಣ ಚಿತ್ರದ ಶೂಟಿಂಗ್ ನಡೆಯುತ್ತಿದ್ದು ಶರತ್ ಕುಮಾರ್, ರವಿಶಂಕರ್ ಹಾಗೂ ಆದಿತ್ಯ ಮೆನನ್ ಶೂಟಿಂಗ್ ನಲ್ಲಿ ಭಾಗಿ ಆಗಿದ್ದಾರೆ.
ತಾಕತ್ತಿದ್ದರೆ ಕ್ಯಾಸೆಟ್ ಬಿಡುಗಡೆ ಮಾಡಲಿ: ಗುಡುಗಿದ ನಿಖಿಲ್ ಕುಮಾರಸ್ವಾಮಿ.!
ಶರತ್ ಕುಮಾರ್ ಅಭಿನಯದ ಐದನೇ ಕನ್ನಡ ಸಿನಿಮಾ ಇದಾಗಿದ್ದು ಜಾಗ್ವಾರ್ ಚಿತ್ರದ ನಂತರ ಆದಿತ್ಯ ಮೆನನ್ ಮತ್ತೆ ನಿಖಿಲ್ ಕುಮಾರ್ ಜೊತೆಯಲ್ಲಿ ಅಭಿನಯ ಮಾಡುತ್ತಿದ್ದಾರೆ. ಇನ್ನು ರವಿಶಂಕರ್ ಸೀತಾ ರಾಮ ಕಲ್ಯಾಣ ಸಿನಿಮಾದಲ್ಲಿ ವಿಭಿನ್ನ ಗೆಟಪ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಎ ಹರ್ಷ ಆದಷ್ಟು ಬೇಗ ಸಿನಿಮಾವನ್ನ ತೆರೆ ಮೇಲೆ ತರುವ ಪ್ರಯತ್ನ ಮಾಡಲಿದ್ದಾರೆ. ಇನ್ನು ಚುನಾವಣೆ ಪ್ರಚಾರದಲ್ಲಿ ಬ್ಯುಸಿ ಆಗಿರುವ ನಿಝಿಲ್ ಬಿಡುವು ಮಾಡಿಕೊಂಡು ಚಿತ್ರೀಕರಣದ ಸ್ಥಳಕ್ಕೆ ಬಂದು ತಮ್ಮ ಸಿನಿಮಾದಲ್ಲಿ ಅಭಿನಯಿಸಲು ಬಂದ ಕಲಾವಿದರನ್ನ ಭೇಟಿ ಮಾಡಿದ್ದಾರೆ.
ರಾಜಮೌಳಿ ಮತ್ತು ನಿಖಿಲ್ ಬಗ್ಗೆ ಹೊರಬಿತ್ತು ರೋಚಕ ಸುದ್ದಿ.!