Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ನಲ್ಲಿ 'ಶಾಸನ' ಬರೆಯಲು ಬಂದ ಹೊಸ ಹುಡುಗರು
ಕನ್ನಡದಲ್ಲಿ ದಿನೇ ದಿನೇ ಹೊಸ ಹುಡುಗರು ಸಿನಿಮಾ ಮಾಡುವ ಕನಸು ಹೊತ್ತು ಗಾಂಧಿನಗರಕ್ಕೆ ಬರುತ್ತಾರೆ. ಈಗ ಸ್ಯಾಂಡಲ್ ವುಡ್ ನಲ್ಲಿ 'ಶಾಸನ' ಬರೆಯಲು ಹೊಸ ಚಿತ್ರತಂಡ ಬಂದಿದೆ.
'ಶಾಸನ' ಸಿನಿಮಾದ ಮುಹೂರ್ತ ಕಾರ್ಯಕ್ರಮ ಇತ್ತೀಚಿಗಷ್ಟೆ ನಡೆದಿದೆ. ಈ ಚಿತ್ರದ ಮೂಲಕ ಧನು ಖಳನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಧ್ಯಮ ಕ್ಷೇತ್ರದ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡಿರುವ ಧನು ಈಗ ಬೆಳ್ಳಿತೆರೆ ಮೇಲೆ ಮಿಂಚಲು ಮೊದಲ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರದಲ್ಲಿ ಅವರು ವಿಲನ್ ಆಗಿ ನಟಿಸುತ್ತಿದ್ದು, ಆ ಪಾತ್ರಕ್ಕೆ ಇನ್ನೊಂದು ಶೇಡ್ ಕೂಡ ಇದೆಯಂತೆ.
'ಒಂದಲ್ಲಾ ಎರಡಲ್ಲಾ' ಸಾವಿರಾರು ಜನರ ಮೆಚ್ಚುಗೆ ಪಡೆದ ಟ್ರೇಲರ್
ಈ ಹಿಂದೆ 'ಚಿನ್ನದ ಗೊಂಬೆ' ಎಂಬ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಪಂಕಜ್ ಬಾಲನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಶ್ರೀಧರ್ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ರಂಜಿತಾ ಮತ್ತು ಹರ್ಷಿತಾ ನಾಯಕಿಯರಾಗಿದ್ದಾರೆ. ಮನುಶ್ರೀ ಮೂವೀಸ್ ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ.
ಸಿನಿಮಾ 18 ಹಾಗೂ 21ನೇ ಶತಮಾನದ ಶೇಡ್ ಇರುವ ಕಥೆ ಹೊಂದಿದೆಯಂತೆ. ಸಸ್ಪೆನ್ಸ್ ಹಾಗೂ ಥ್ರಿಲ್ಲರ್ ಜಾನರ್ ನ ಸಿನಿಮಾ ಇದಾಗಿದ್ದು, ಚಿಕ್ಕಮಗಳೂರಿನಲ್ಲಿ ಈ ತಿಂಗಳ ಕೊನೆಯಲ್ಲಿ ಶೂಟಿಂಗ್ ಶುರು ಆಗಲಿದೆ .