Don't Miss!
- News Mandya: ಏಪ್ರಿಲ್ 24 ರಿಂದ 26ರ ವರೆಗೆ ಮಂಡ್ಯದಲ್ಲಿ ಪ್ರತಿಬಂಧಕಾಜ್ಞೆ ಜಾರಿ
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉಪೇಂದ್ರ ಅಭಿಮಾನಿಗಳ ಗೊಂದಲ: ಸ್ಪಷ್ಟನೆ ಕೊಟ್ಟ ಶಶಾಂಕ್
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಉಪೇಂದ್ರ-ಶಶಾಂಕ್ ಕಾಂಬಿನೇಶನ್ ನ ಸಿನಿಮಾದ ಸ್ಕ್ರಿಪ್ಟ್ ಪೂಜೆ ಮಾಡಲಾಗಿತ್ತು.
Recommended Video
ಪ್ರತಿಭಾವಂತ ನಿರ್ದೇಶಕ ಹಾಗೂ ಉಪೇಂದ್ರ ಜೋಡಿಯ ಸಿನಿಮಾ ಬಗ್ಗೆ ಉಪ್ಪಿ ಅಭಿಮಾನಿಗಳು, ಸಿನಿಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸ್ಕ್ರಿಪ್ಟ್ ಪೂಜೆ ಬಳಿಕ ಸಿನಿಮಾ ಮುಂದಕ್ಕೆ ಹೋಗಲೇ ಇಲ್ಲ. ಇದು ಉಪೇಂದ್ರ ಅಭಿಮಾನಿಗಳ ಗೊಂದಲ ಹಾಗೂ ನಿರಾಶೆಗೆ ಕಾರಣವಾಗಿತ್ತು.
ಆದರೆ ಈಗ ನಿರ್ದೇಶಕ ಶಶಾಂಕ್ ಟ್ವೀಟ್ ಮಾಡಿದ್ದು, 'ಉಪೇಂದ್ರ ಅಭಿಮಾನಿಗಳು ಗೊಂದಲ ಮತ್ತು ನಿರಾಶೆಗೊಳಗಾಗದಿರಿ. ನನ್ನ ಮತ್ತು ಉಪ್ಪಿ ಸರ್ ಕಾಂಬಿನೇಶನ್ ಸಿನಿಮಾ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪೂರ್ವ ತಯಾರಿ ಶುರುವಾಗಿದೆ' ಎಂದು ಹೇಳಿದ್ದಾರೆ.
ಶಶಾಂಕ್ ನಿರ್ದೇಶಿಸುತ್ತಿರುವ ಈ ಸಿನಿಮಾ ಕನ್ನಡ-ತೆಲುಗು-ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಆಗಲಿದೆ. ಉಪೇಂದ್ರ ನಟನೆಯ 54 ನೇ ಸಿನಿಮಾ ಇದಾಗಿದ್ದು, ಸಿನಿಮಾವು ನಿಜ ಘಟನೆಗಳ ಮೇಲೆ ಆಧರಿತವಾಗಲಿದೆಯಂತೆ.
ಶಶಾಂತ್ ಅವರೇ ನಿರ್ಮಿಸುತ್ತಿರುವ ಈ ಸಿನಿಮಾಕ್ಕೆ ನಾಯಕಿಯರ ಆಯ್ಕೆಯೂ ಆಗಿದೆ. ನಿಶ್ಚಿಕಾ ನಾಯ್ಡು ಮತ್ತು ಬೀರ್ಬಲ್ ಸಿನಿಮಾ ಖ್ಯಾತಿಯ ರುಕ್ಮಿಣಿ ನಾಯಕಿಯರಾಗಿದ್ದಾರೆ.
ಪ್ರಸ್ತುತ, ಉಪೇಂದ್ರ ಅವರು ಚಂದ್ರು ನಿರ್ದೇಶನದ 'ಕಬ್ಜ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾವು ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ತೆಲುಗಿನಲ್ಲಿ ವರುಣ್ ತೇಜ್ ನಟನೆಯ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಬುದ್ಧಿವಂತ 2, ತ್ರಿಶೂಲಂ, ಹೋಮ್ ಮಿನಿಸ್ಟರ್, ಮಂಜು ಮಾಂಡವ್ಯ ಜೊತೆಗೆ ಒಂದು ಸಿನಿಮಾಗಳಲ್ಲಿ ನಟಿಸಲಿದ್ದಾರೆ ಉಪೇಂದ್ರ.