Don't Miss!
- News ಹಳೇ ಹುಲಿ ಪಿಸಿ ಮೋಹನ್ ಎದುರು ಮನ್ಸೂರ್ ಅಲಿ ಖಾನ್ ಕಣಕ್ಕೆ; ಮತ್ತೊಮ್ಮೆ ಇತಿಹಾಸ ಬರೆಯುತ್ತಾರಾ ಬಿಜೆಪಿ ಕಲಿ?
- Finance ಜಗತ್ತಿಗೆ ಭಾರತವೇ ಬಾಸ್, ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದ್ದು ಏನು?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಹೊಸ ಸಿನಿಮಾ ಹೆಸರೇನು ಗೊತ್ತಾ?
ಈ ಹಿಂದೆ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಶ್ರೀಮಾನ್ ಬಿ ಎಸ್ ಯಡಿಯೂರಪ್ಪ ಅವರೇ ತಮ್ಮ ಚಿತ್ರದ ಕಥಾನಾಯಕ ಎಂದಿದ್ದರು. ಆಕ್ಷನ್, ಕಟ್ ಹೇಳಲಿರುವವರು ಎಸ್ ವಿ ರಾಜೇಂದ್ರ ಸಿಂಗ್ ಬಾಬು.
ಬಳಿಕ ಆ ಚಿತ್ರದ ಕಥೆ ಏನಾಯಿತೋ ಏನೋ ಗೊತ್ತಿಲ್ಲ. ರೇಣುಕಾಚಾರ್ಯ ಅವರು ಸೈಲೆಂಟ್ ಆದರು. ರಾಜೇಂದ್ರ ಸಿಂಗ್ ಬಾಬು ಬಾಯ್ಬಿಡಲಿಲ್ಲ. ಈಗ ಯಡಿಯೂರಪ್ಪ ಅವರ ಕುರಿತು ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಸೂರಪ್ಪ ಬಾಬು. ಚಿತ್ರದ ಶೀರ್ಷಿಕೆ 'ಶಿಕಾರಿಪುರ'.
ಈಗಾಗಲೆ ಈ ಶೀರ್ಷಿಕೆಯನ್ನು ಫಿಲಂ ಚೇಂಬರ್ ನಲ್ಲಿ ನೋಂದಾಯಿಸಿಕೊಳ್ಳಲಾಗಿದೆ. ಯಡಿಯೂರಪ್ಪ ಪಾತ್ರವನ್ನು ಯಾರು ಪೋಷಿಸಲಿದ್ದಾರೆ ಎಂಬುದು ಖಚಿತವಾಗಿಲ್ಲದಿದ್ದರೂ, ಪರಭಾಷಾ ಚಿತ್ರಗಳಲ್ಲಿ ಹೆಸರು ಮಾಡಿರುವ ನಾಜಿರ್ ಪೋಷಿಸುವ ಸಾಧ್ಯತೆಗಳಿವೆ.
ಚಿತ್ರದಲ್ಲಿಯಡಿಯೂರಪ್ಪ ಪಾತ್ರವನ್ನು ನಾಯಕನನ್ನಾಗಿ ಚಿತ್ರಿಸಲಾಗುತ್ತದೋ ಅಥವಾ ಖಳನಾಯಕನನ್ನಾಗಿಯೋ? ಚಿತ್ರದ ನಾಯಕಿ ಯಾರು? ಇಷ್ಟಕ್ಕೂ ಚಿತ್ರದಲ್ಲಿ ನಾಯಕಿ ಇರುತ್ತಾರಾ? ಎಂಬ ಮುಂತಾದ ಪ್ರಶ್ನೆಗಳಿಗೆ ಉತ್ತರ ಇನ್ನಷ್ಟೇ ಸಿಗಬೇಕು. (ಏಜೆನ್ಸೀಸ್)