Don't Miss!
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಹೊಸ ಸಿನಿಮಾ ಹೆಸರೇನು ಗೊತ್ತಾ?
ಈ ಹಿಂದೆ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಶ್ರೀಮಾನ್ ಬಿ ಎಸ್ ಯಡಿಯೂರಪ್ಪ ಅವರೇ ತಮ್ಮ ಚಿತ್ರದ ಕಥಾನಾಯಕ ಎಂದಿದ್ದರು. ಆಕ್ಷನ್, ಕಟ್ ಹೇಳಲಿರುವವರು ಎಸ್ ವಿ ರಾಜೇಂದ್ರ ಸಿಂಗ್ ಬಾಬು.
ಬಳಿಕ ಆ ಚಿತ್ರದ ಕಥೆ ಏನಾಯಿತೋ ಏನೋ ಗೊತ್ತಿಲ್ಲ. ರೇಣುಕಾಚಾರ್ಯ ಅವರು ಸೈಲೆಂಟ್ ಆದರು. ರಾಜೇಂದ್ರ ಸಿಂಗ್ ಬಾಬು ಬಾಯ್ಬಿಡಲಿಲ್ಲ. ಈಗ ಯಡಿಯೂರಪ್ಪ ಅವರ ಕುರಿತು ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಸೂರಪ್ಪ ಬಾಬು. ಚಿತ್ರದ ಶೀರ್ಷಿಕೆ 'ಶಿಕಾರಿಪುರ'.
ಈಗಾಗಲೆ ಈ ಶೀರ್ಷಿಕೆಯನ್ನು ಫಿಲಂ ಚೇಂಬರ್ ನಲ್ಲಿ ನೋಂದಾಯಿಸಿಕೊಳ್ಳಲಾಗಿದೆ. ಯಡಿಯೂರಪ್ಪ ಪಾತ್ರವನ್ನು ಯಾರು ಪೋಷಿಸಲಿದ್ದಾರೆ ಎಂಬುದು ಖಚಿತವಾಗಿಲ್ಲದಿದ್ದರೂ, ಪರಭಾಷಾ ಚಿತ್ರಗಳಲ್ಲಿ ಹೆಸರು ಮಾಡಿರುವ ನಾಜಿರ್ ಪೋಷಿಸುವ ಸಾಧ್ಯತೆಗಳಿವೆ.
ಚಿತ್ರದಲ್ಲಿಯಡಿಯೂರಪ್ಪ ಪಾತ್ರವನ್ನು ನಾಯಕನನ್ನಾಗಿ ಚಿತ್ರಿಸಲಾಗುತ್ತದೋ ಅಥವಾ ಖಳನಾಯಕನನ್ನಾಗಿಯೋ? ಚಿತ್ರದ ನಾಯಕಿ ಯಾರು? ಇಷ್ಟಕ್ಕೂ ಚಿತ್ರದಲ್ಲಿ ನಾಯಕಿ ಇರುತ್ತಾರಾ? ಎಂಬ ಮುಂತಾದ ಪ್ರಶ್ನೆಗಳಿಗೆ ಉತ್ತರ ಇನ್ನಷ್ಟೇ ಸಿಗಬೇಕು. (ಏಜೆನ್ಸೀಸ್)