Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಡಿಯೂರಪ್ಪ ಹೊಸ ಸಿನಿಮಾ ಹೆಸರೇನು ಗೊತ್ತಾ?
ಈ ಹಿಂದೆ ಅಬಕಾರಿ ಸಚಿವ ರೇಣುಕಾಚಾರ್ಯ ಅವರು ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಶ್ರೀಮಾನ್ ಬಿ ಎಸ್ ಯಡಿಯೂರಪ್ಪ ಅವರೇ ತಮ್ಮ ಚಿತ್ರದ ಕಥಾನಾಯಕ ಎಂದಿದ್ದರು. ಆಕ್ಷನ್, ಕಟ್ ಹೇಳಲಿರುವವರು ಎಸ್ ವಿ ರಾಜೇಂದ್ರ ಸಿಂಗ್ ಬಾಬು.
ಬಳಿಕ ಆ ಚಿತ್ರದ ಕಥೆ ಏನಾಯಿತೋ ಏನೋ ಗೊತ್ತಿಲ್ಲ. ರೇಣುಕಾಚಾರ್ಯ ಅವರು ಸೈಲೆಂಟ್ ಆದರು. ರಾಜೇಂದ್ರ ಸಿಂಗ್ ಬಾಬು ಬಾಯ್ಬಿಡಲಿಲ್ಲ. ಈಗ ಯಡಿಯೂರಪ್ಪ ಅವರ ಕುರಿತು ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ ಸೂರಪ್ಪ ಬಾಬು. ಚಿತ್ರದ ಶೀರ್ಷಿಕೆ 'ಶಿಕಾರಿಪುರ'.
ಈಗಾಗಲೆ ಈ ಶೀರ್ಷಿಕೆಯನ್ನು ಫಿಲಂ ಚೇಂಬರ್ ನಲ್ಲಿ ನೋಂದಾಯಿಸಿಕೊಳ್ಳಲಾಗಿದೆ. ಯಡಿಯೂರಪ್ಪ ಪಾತ್ರವನ್ನು ಯಾರು ಪೋಷಿಸಲಿದ್ದಾರೆ ಎಂಬುದು ಖಚಿತವಾಗಿಲ್ಲದಿದ್ದರೂ, ಪರಭಾಷಾ ಚಿತ್ರಗಳಲ್ಲಿ ಹೆಸರು ಮಾಡಿರುವ ನಾಜಿರ್ ಪೋಷಿಸುವ ಸಾಧ್ಯತೆಗಳಿವೆ.
ಚಿತ್ರದಲ್ಲಿಯಡಿಯೂರಪ್ಪ ಪಾತ್ರವನ್ನು ನಾಯಕನನ್ನಾಗಿ ಚಿತ್ರಿಸಲಾಗುತ್ತದೋ ಅಥವಾ ಖಳನಾಯಕನನ್ನಾಗಿಯೋ? ಚಿತ್ರದ ನಾಯಕಿ ಯಾರು? ಇಷ್ಟಕ್ಕೂ ಚಿತ್ರದಲ್ಲಿ ನಾಯಕಿ ಇರುತ್ತಾರಾ? ಎಂಬ ಮುಂತಾದ ಪ್ರಶ್ನೆಗಳಿಗೆ ಉತ್ತರ ಇನ್ನಷ್ಟೇ ಸಿಗಬೇಕು. (ಏಜೆನ್ಸೀಸ್)