Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಗಲಿದ ಅನಂತ್ ಕುಮಾರ್ ರಿಗೆ ಗಣೇಶ್ ದಂಪತಿ ಅಂತಿಮ ನಮನ
ಭಾರತೀಯ ಜನತಾ ಪಕ್ಷ ಕಂಡ ಬಲಿಷ್ಟ ನಾಯಕ, ಜನಪ್ರಿಯ ರಾಜಕಾರಣಿ ಅನಂತ್ ಕುಮಾರ್ ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜಕೀಯ ವ್ಯಕ್ತಿಗಳ ಜೊತೆಗೆ ಸಿನಿಮಾರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆ ಆಗಿರುವ ಶಿಲ್ಪಾ ಗಣೇಶ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
''ಅನಂತ್ ಕುಮಾರ್ ಅವರ ಮರಣದಿಂದ ನಾನು ದುಃಖಿತಳಾಗಿದ್ದೇನೆ. ಬಿಜಿಪಿ ಪಕ್ಷವನ್ನು ಬಲಪಡಿಸಲು ಹಾಗೂ ದೇಶ ಸೇವೆ ಮಾಡಲು ತಮ್ಮ ಜೀವನವನ್ನೇ ಅವರು ಮುಡಿಪಾಗಿಟ್ಟಿದ್ದರು.'' ಎಂದು ಟ್ವೀಟ್ ಮಾಡಿದ್ದಾರೆ.
Saddened by the untimely demise of Ananth Kumar ji who dedicated his entire life towards strengthening BJP & in the service of the Nation. My deepest condolences to his family & loved ones. pic.twitter.com/HGNBSth4Mu
— Shilpa Ganesh (@ShilpaaGanesh) November 12, 2018
ಜೊತೆಗೆ ಶಿಲ್ಪಾ ಗಣೇಶ್ ಪತಿ, ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಅನಂತ್ ಕುಮಾರ್ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ. ''ಅನಂತ್ ಕುಮಾರ್ ಒಬ್ಬ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನಾಯಕರು. ಅವರ ಇಡೀ ಕುಟುಂಬ ಹಾಗೂ ಅವರ ಹಿತೈಷಿಗಳಿಗೆ ಸಂತಾಪ ಸೂಚಿಸುತ್ತೇನೆ.'' ಎಂದಿದ್ದಾರೆ.
My deepest condolences to all the family members and the loved ones of Shri.Ananthkumar. He was a distinguished personality. RIP pic.twitter.com/9tmL0Fjver
— Ganesh (@Official_Ganesh) November 12, 2018
ಅಂದಹಾಗೆ, ಕೇಂದ್ರ ಸಚಿವ, ಬಿಜೆಪಿಯ ಪ್ರಮುಖ ನಾಯಕ ಅನಂತ್ ಕುಮಾರ್ (59) ಅವರು ನವೆಂಬರ್ 12ರ ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಅವರು ನಗರದ ಶಂಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಕಡೆಯ ಹಂತದಲ್ಲಿ ಲಂಡನ್ ಗೆ ಹೋಗಿ ಚಿಕಿತ್ಸೆ ಪಡೆದು, ಸಾಕಷ್ಟು ಹೋರಾಟ ನಡೆಸಿದರೂ ಗೆಲ್ಲಲು ಸಾಧ್ಯವಾಗಲೇ ಇಲ್ಲ.