Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜ್ಯ ಸರ್ಕಾರದ ವಿರುದ್ಧ ಗುಟುರು ಹಾಕಿದ ಗಣೇಶ್ ಪತ್ನಿ
ಡಿ.ವೈ.ಎಸ್.ಪಿ ಗಣಪತಿ ಆತ್ಮಹತ್ಯೆ ಪ್ರಕರಣದಿಂದ ವಿಧಾನ ಮಂಡಲದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಅಹೋರಾತ್ರಿ ಧರಣಿ ಮಾಡಿದರೂ ಕೂಡ ಕೆ.ಜೆ.ಜಾರ್ಜ್ ರಾಜೀನಾಮೆ ಕೊಡಲು ತಯಾರಿಲ್ಲ.
ಸಚಿವ ಕೆ.ಜೆ.ಜಾರ್ಜ್ ಪರ ಬ್ಯಾಟಿಂಗ್ ಮುಂದುವರಿಸಿರುವ ಸಿ.ಎಂ.ಸಿದ್ಧರಾಮಯ್ಯ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಗುಟುರು ಹಾಕಿದ್ದಾರೆ. ['ಜಾರ್ಜ್ ರಾಜೀನಾಮೆ ಪಡೆದು, ಉತ್ತರ ಕೊಡಿ']
ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕೂಡ ಆಗಿರುವ ಶಿಲ್ಪಾ ಗಣೇಶ್ ಇಂದು ಕೊಡಗಿನ ಸೋಮವಾರಪೇಟೆ ತಾಲೂಕಿನಲ್ಲಿ ಇರುವ ಡಿ.ವೈ.ಎಸ್.ಪಿ ಗಣಪತಿ ಅವರ ಸ್ವಗ್ರಾಮ ರಂಗಸಮುದ್ರಕ್ಕೆ ಭೇಟಿ ನೀಡಿ, ಗಣಪತಿ ಪತ್ನಿ ಪಾವನಾ ಅವರಿಗೆ ಸಾಂತ್ವನ ಹೇಳಿದರು. [ನ್ಯಾಯಾಂಗ ತನಿಖೆ ಮೇಲೆ ನಂಬಿಕೆ ಇಲ್ಲ: ಗಣಪತಿ ಪತ್ನಿ ಪಾವನಾ]
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಿಲ್ಪಾ ಗಣೇಶ್, ''ನೈತಿಕ ಬೆಂಬಲ ನೀಡಲು ಗಣಪತಿ ನಿವಾಸಕ್ಕೆ ಭೇಟಿ ನೀಡಿದ್ದೇನೆ. ಅವರ ಸಮಸ್ಯೆಗಳನ್ನ ನಮ್ಮ ಬಳಿ ಹೇಳಿಕೊಂಡಿದ್ದಾರೆ. ಅದನ್ನ ಯಾರಿಗೆ ಹೇಳಬೇಕೋ, ಹೇಳ್ತೀವಿ. ನಾವು ಇಲ್ಲಿ ಬಂದಿದ್ದು ಒಳ್ಳೆಯದ್ದೇ ಆಯ್ತು.''[ರಾಜಕೀಯಕ್ಕೂ ಸಿನಿಮಾಗೂ ಡೈವೋರ್ಸೇ ಹೆಚ್ಚು]
''ಪಕ್ಷದ ಕಡೆಯಿಂದ ಬಂದಿದ್ದೀನಿ ಅಂದ ಮಾತ್ರಕ್ಕೆ ಅದು ಪೊಲಿಟಿಸೈಸ್ ಆಗೋದು ಬೇಡ. ಒಂದು ಹೆಣ್ಣಾಗಿ, ತಾಯಿ ಆಗಿ ನಾನು ಇಲ್ಲಿಗೆ ಬಂದಿದ್ದೇನೆ. ಇವತ್ತು ಬಂದ್ ಇದೆ ಅಂತ ಗೊತ್ತಾದರೂ ಕೂಡ ಬಂದು, ಅವರನ್ನ ಮೀಟ್ ಮಾಡಿದ್ದೇವೆ.'' [ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]
''ರಾಜ್ಯ ಸರ್ಕಾರಕ್ಕೆ ಅಷ್ಟು ಧೈರ್ಯ ಇದ್ದರೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನ ಸಿ.ಬಿ.ಐ ತನಿಖೆಗೆ ಕೊಟ್ಟುಬಿಡಲಿ. ಅವರು ತಪ್ಪು ಮಾಡಿದ್ದಾರೆ ಅಂತ ಗೊತ್ತಿರುವುದಕ್ಕೆ ಅದನ್ನ ಮುಚ್ಚಲು ನೋಡುತ್ತಿದ್ದಾರೆ'' ಅಂತ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.