Don't Miss!
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Automobiles ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವ ಸೈನ್ಯ ಹುಡುಗರಿಂದ ಮಹತ್ವದ ಕಾರ್ಯಕ್ರಮ
Recommended Video
ಹ್ಯಾಟ್ರಿಕ್ ಹೀರೋ ಡಾ ಶಿವರಾಜ್ ಕುಮಾರ್ ಅಭಿನಯದ "ಕವಚ" ಸಿನಿಮಾ ಇದೇ ತಿಂಗಳು 18 ರಂದು ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ಸೆಂಚುರಿ ಸ್ಟಾರ್ ಕಣ್ಣಿಲ್ಲದ ವ್ಯಕ್ತಿಯಾಗಿ ಅಭಿನಯಿಸಿದ್ದಾರೆ. ಇದು ಸಹಜವಾಗಿ ಶಿವು ಫ್ಯಾನ್ಸ್ ಹೊಸ ರೀತಿಯ ಮನರಂಜನೆಯಾಗಲಿದೆ.
'ಕವಚ' ಚಿತ್ರದ ಪ್ರಯುಕ್ತ ಶಿವಣ್ಣ ಅಭಿಮಾನಿಗಳು ವಿಶೇಷವಾದ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದಾರೆ. ಬೆಂಗಳೂರಿನ ಶಿವ ಸೈನ್ಯ ಹುಡುಗರು 'ಕವಚ' ಬಿಡುಗಡೆಯ ದಿನ ಕೆಲವು ಮಹತ್ವದ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವನ್ನು ಏರ್ಪಡಿಸಿದ್ದಾರೆ.
ಮೂರು ದಿನ 'ಗೃಹಬಂಧನ'ದ ಬಗ್ಗೆ 'ಸಿಂಹದ ಮರಿ' ಹೇಳಿದ್ದೇನು?
ಹೌದು, ಕೆಜಿ ರಸ್ತೆಯ ತ್ರಿವೇಣಿ ಚಿತ್ರಮಂದಿರದಲ್ಲಿ ಕವಚ ಸಿನಿಮಾ ಬಿಡುಗಡೆಯಾಗುತ್ತಿದೆ. ಅದೇ ದಿನ ಅದೇ ಸ್ಥಳದಲ್ಲಿ ನೇತ್ರ ತಪಾಸಣೆ, ನೇತ್ರ ಚಿಕಿತ್ಸೆ, ನೇತ್ರದಾನ ಎಂಬ ಕಾರ್ಯಕ್ರಮಗಳನ್ನ ಆಯೋಜನೆ ಮಾಡಿದ್ದಾರೆ.
ಕತೆ ಕೇಳುವಾಗಲೇ ಫ್ಯಾನ್ಸ್ ಬಗ್ಗೆಯೂ ಯೋಚಿಸುತ್ತೇನೆ ಎಂದ ಡಾ.ಶಿವರಾಜ್ ಕುಮಾರ್.!
ವರ್ಧಮಾನ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9 ಗಂಟೆಯಿಂದ 2 ಗಂಟೆಯವರೆಗೆ ಅವಶ್ಯಕತೆವುಳ್ಳವರು ಬಂದು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಮನವಿ ಮಾಡಿಕೊಂಡಿದ್ದಾರೆ.
ಇನ್ನುಳಿದಂತೆ ಕವಚ ಸಿನಿಮಾ ಮಲಯಾಳಂ ಭಾಷೆಯ ಒಪ್ಪಂ ಚಿತ್ರದ ರೀಮೇಕ್ ಆಗಿದ್ದು, ಈಗಾಗಲೇ ಟ್ರೈಲರ್ ಮತ್ತು ಹಾಡುಗಳ ಮೂಲಕ ಗಮನ ಸೆಳೆಯುತ್ತಿದೆ. ಜಿ.ವಿ.ಆರ್ ವಾಸು ಈ ಚಿತ್ರವನ್ನ ನಿರ್ದೇಶನ ಮಾಡಿದ್ದು, ಇಶಾ ಕೊಪ್ಪಿಕಾರ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಇವರ ಜೊತೆ ಕೃತಿಕಾ ಜಯರಾಂ, ಬೇಬಿ ಮೀನಾಕ್ಷಿ, ವಸಿಷ್ಠ ಸಿಂಹ ಕಾಣಿಸಿಕೊಂಡಿದ್ದಾರೆ.