Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಮಾನಿಗಳ ನಡುವಿನ ಸಮರಸಕ್ಕೆ ಪ್ರೇಮ್ ಮಾಡಿದ ಪ್ಲಾನ್
Recommended Video
'ದಿ ವಿಲನ್' ಸದ್ಯ ಗಾಂಧಿನಗರದಲ್ಲಿ ಹಾಟ್ ಟಾಪಿಕ್ ಆಗಿರುವ ಸಿನಿಮಾ. ಆರಂಭದಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿ ಮಾಡುತ್ತಿರುವ 'ದಿ ವಿಲನ್' ಆ ನಂತರ ಬೇರೆಯದ್ದೆ ವಿಚಾರಕ್ಕೆ ಸುದ್ದಿ ಮಾಡಿತು. ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸಾಕಷ್ಟು ವಿವಾದ ಸೃಷ್ಟಿ ಆಗಿತ್ತು. ಮೊದಲ ಹಾಡಿನ ಯಶಸ್ವಿನ ಬಳಿಕ ಈಗ ಸಿನಿಮಾದ ಎರಡನೇ ಹಾಡನ್ನು ಬಿಡುಗಡೆ ಮಾಡಲು ಸಿದ್ದತೆ ಪ್ರೇಮ್ ತಯಾರಿ ಮಾಡಿಕೊಂಡಿದ್ದಾರೆ.
ಎರಡನೇ ಹಾಡು ಬಿಡುಗಡೆ ಆಗುವಾಗ ಯಾವುದೇ ರೀತಿಯ ವಿವಾದ ಆಗಬಾರದು ಎಂದು ನಿರ್ದೇಶಕ ಪ್ರೇಮ್ ಆರಂಭದಲ್ಲೇ ಎಚ್ಚರ ವಹಿಸಿದಂತಿದೆ. ಯಾಕೆಂದರೆ, ಹಾಡನ್ನು ಬಿಡುಗಡೆ ಮಾಡುತ್ತಿರುವುದು ಶಿವರಾಜ್ ಕುಮಾರ್ ಅಭಿಮಾನಿಗಳು.
ಶಿವಣ್ಣನ ಅಭಿಮಾನಿಗಳಿಗೆ ಮತ್ತೆ ನಿರಾಸೆ ಆದರೂ ಆಗಬಹುದು!
ಕಿಚ್ಚ ಸುದೀಪ್ ಹಾಗೂ ಶಿವರಾಜ್ ಕುಮಾರ್ ಅಭಿಮಾಗಳು ಸದಾ ಬಾಂದವ್ಯದಿಂದ ಇರಲಿ ಎನ್ನುವ ಉದ್ದೇಶದಿಂದ ಪ್ರೇಮ್ ಈ ರೀತಿಯ ಆಲೋಚನೆ ಮಾಡಿದ್ದಾರೆ. 'ದಿ ವಿಲನ್' ಚಿತ್ರದ 2ನೇ ಸಾಂಗ್ ಇದೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ ರಾಜ್ ಕುಮಾರ್ ಪುಣ್ಯಭೂಮಿಯಲ್ಲಿ ಬಿಡುಗಡೆಯಾಗಲಿದೆ.
'ದಿ ವಿಲನ್' ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದು, ಚಿತ್ರದ ಎಲ್ಲಾ ಹಾಡುಗಳನ್ನು ನಿರ್ದೇಶಕ ಪ್ರೇಮ್ ಅವರೇ ಬರೆದಿದ್ದಾರೆ. ಎರಡನೇ ಹಾಡನ್ನು ಕೈಲಾಶ್ ಕೇರ್ ಹಾಡಿದ್ದಾರೆ. ಅಂದಹಾಗೆ, ಸುದೀಪ್, ಶಿವರಾಜ್ ಕುಮಾರ್, ಆಮಿ ಜಾಕ್ಸನ್ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆಗಸ್ಟ್ ನಲ್ಲಿ ಚಿತ್ರ ಬಿಡುಗಡೆ ಮಾಡುವ ಪ್ಲಾನ್ ಚಿತ್ರತಂಡದ್ದಾಗಿದೆ.